ಪಾಲ್ಘರ್ : ಪಾಲ್ಘರ್ ನಲ್ಲಿನ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಜನರ ಪೈಕಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಅಪ್ರಾಪ್ತರು ಸೇರಿದಂತೆ 115 ಜನರನ್ನು ಬಂಧಿಸಲಾಗಿದೆ. ಆದರೆ, ಈ ಪೈಕಿ ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪೊಲೀಸ್ ಠಾಣೆಯಲ್ಲಿ 20 ಜನರೊಂದಿಗೆ ಇರಿಸಲಾಗಿತ್ತು. ಸೋಂಕಿತ ವ್ಯಕ್ತಿಯನ್ನು ಪಾಲ್ಘರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಜೊತೆಗಿದ್ದ 20 ಜನರನ್ನೂ ಹಾಗೂ 23 ಜನ ಪೊಲೀಸರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪೊಲೀಸರು ಹುಡುಕಲು ಆರಂಭಿಸಿದ್ದಾರೆ. ಅಲ್ಲದೆ. ವ್ಯಕ್ತಿಗೆ ಸೋಂಕು ಹೇಗೆ ತಗುಲಿತು ಎಂಬುದರ ಕುರಿತಂತೆಯೂ ಅಲ್ಲಿನ ಆರೋಗ್ಯ ಇಲಾಖೆ ಪತ್ತೆ ಹಚ್ಚಲು ಕಾರ್ಯ ಆರಂಭಿಸಿದೆ.

Leave a Reply

Your email address will not be published. Required fields are marked *

You May Also Like

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…

ಗುತ್ತಿಗೆ ದಾರನಿಂದ ಕಳಪೆ ಕಾಮಗಾರಿ-ಗ್ರಾಮಸ್ಥರ ಆಕ್ರೋಶ

ಲಕ್ಷ್ಮೇಶ್ವರ: ಉತ್ತಮ ರಸ್ತೆ ನಿರ್ಮಾಣಕ್ಕೆಂದು ಸರಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತೇ. ಆದ್ರೆ, ಗುತ್ತಿಗೆದಾರರು…

ರೈತರು ಬೆಳೆಗೆ ಬೆಳೆ ಮಾರಾಟಕ್ಕೆ ಡಿಕೆಶಿ ಮನವಿ

ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್…