ಪಾಲ್ಘರ್ : ಪಾಲ್ಘರ್ ನಲ್ಲಿನ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಜನರ ಪೈಕಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಅಪ್ರಾಪ್ತರು ಸೇರಿದಂತೆ 115 ಜನರನ್ನು ಬಂಧಿಸಲಾಗಿದೆ. ಆದರೆ, ಈ ಪೈಕಿ ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪೊಲೀಸ್ ಠಾಣೆಯಲ್ಲಿ 20 ಜನರೊಂದಿಗೆ ಇರಿಸಲಾಗಿತ್ತು. ಸೋಂಕಿತ ವ್ಯಕ್ತಿಯನ್ನು ಪಾಲ್ಘರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಜೊತೆಗಿದ್ದ 20 ಜನರನ್ನೂ ಹಾಗೂ 23 ಜನ ಪೊಲೀಸರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪೊಲೀಸರು ಹುಡುಕಲು ಆರಂಭಿಸಿದ್ದಾರೆ. ಅಲ್ಲದೆ. ವ್ಯಕ್ತಿಗೆ ಸೋಂಕು ಹೇಗೆ ತಗುಲಿತು ಎಂಬುದರ ಕುರಿತಂತೆಯೂ ಅಲ್ಲಿನ ಆರೋಗ್ಯ ಇಲಾಖೆ ಪತ್ತೆ ಹಚ್ಚಲು ಕಾರ್ಯ ಆರಂಭಿಸಿದೆ.

Leave a Reply

Your email address will not be published. Required fields are marked *

You May Also Like

ಶಾಂತೂ ಎಂಬ ಕಾಯಕ ಪ್ರಜ್ಞೆ ಜೀವದ ಸೇವಾ ಕೈಂಕರ್ಯ ಅನನ್ಯ…!!!

ಆಲಮಟ್ಟಿ : ಕಾಯಕ ನಿಷ್ಟೆ,ಕಾಯಕ ಪ್ರಜ್ಞೆ ಪದಕ್ಕೆ ಪ್ರಸನ್ನ ಭಾವದ ಶಾಂತೂ ತಡಸಿ ವಿಶೇಷ ಮೌಲ್ಯ…

9 ರಂದು ಬಸವನಾಡಿನ ಕೃಷ್ಣೆಯ ತಟದಲ್ಲಿ ಶಿಕ್ಷಣ ತಜ್ಞ ಶಿವಾನಂದ ಪಟ್ಟಣಶೆಟ್ಚರ ಸಭಾ ವೇದಿಕೆ ಉದ್ಘಾಟನೆ

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿ ಆಲಮಟ್ಟಿ : ಇಲ್ಲಿನ ಗುರು ಬಳಗದ ಅಭಿಲಾಷೆಯಂತೆ ಶಿಕ್ಷಣ…

ಜಿಲ್ಲಾ ನ್ಯಾಯಾದೀಶನ ವಜಾಕ್ಕೆ ಒತ್ತಾಯಿಸಿ ಫೆ.1ರಂದು ಬಂಜಾರ ಸಮಾಜದಿಂದ ಪ್ರತಿಭಟನೆ

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ- ಶಿವಾನಂದ ಪಟ್ಟಣಶೆಟ್ಚರ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಹೊಸ ಶಿಕ್ಷಣ ನೀತಿ ಬಂದಿದೆ. ಸ್ಪಧಾ೯ತ್ಮಕ ಮನೋಭಾವ ವಿದ್ಯಾರ್ಥಿಗಳಲ್ಲಿ…