ಪಾಲ್ಘರ್ : ಪಾಲ್ಘರ್ ನಲ್ಲಿನ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಜನರ ಪೈಕಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಅಪ್ರಾಪ್ತರು ಸೇರಿದಂತೆ 115 ಜನರನ್ನು ಬಂಧಿಸಲಾಗಿದೆ. ಆದರೆ, ಈ ಪೈಕಿ ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪೊಲೀಸ್ ಠಾಣೆಯಲ್ಲಿ 20 ಜನರೊಂದಿಗೆ ಇರಿಸಲಾಗಿತ್ತು. ಸೋಂಕಿತ ವ್ಯಕ್ತಿಯನ್ನು ಪಾಲ್ಘರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಜೊತೆಗಿದ್ದ 20 ಜನರನ್ನೂ ಹಾಗೂ 23 ಜನ ಪೊಲೀಸರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪೊಲೀಸರು ಹುಡುಕಲು ಆರಂಭಿಸಿದ್ದಾರೆ. ಅಲ್ಲದೆ. ವ್ಯಕ್ತಿಗೆ ಸೋಂಕು ಹೇಗೆ ತಗುಲಿತು ಎಂಬುದರ ಕುರಿತಂತೆಯೂ ಅಲ್ಲಿನ ಆರೋಗ್ಯ ಇಲಾಖೆ ಪತ್ತೆ ಹಚ್ಚಲು ಕಾರ್ಯ ಆರಂಭಿಸಿದೆ.

Leave a Reply

Your email address will not be published. Required fields are marked *

You May Also Like

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…

ಗುರು-ಶಿಷ್ಯರ ಸಂಬಂಧ ಪವಿತ್ರ- ಜಿ.ಎಂ. ಕೋಟ್ಯಾಳ

ಆಲಮಟ್ಟಿ : ಗುರು ಶಿಷ್ಯರ ಸಂಬಂಧ ಬಹಳಷ್ಟು ಪವಿತ್ರಮಯ. ಆದರೆ ಇತ್ತಿತ್ತಲಾಗಿ ಆ ಭಾವ ಕಣ್ಮರೆಯಾಗುತ್ತಿದೆ.…