ಉಡುಪಿ: ಈಗಾಗಲೇ ಲಾಕ್ ಡೌನ್ ಸಡಿಲಿಗೊಳಿಸಿ ಬೇರೆ ಜಿಲ್ಲೆ ಹಾಗೂ ರಾಜ್ಯದಲ್ಲಿರುವ ಕಾರ್ಮಿಕರನ್ನು ತವರಿಗೆ ಕರೆತರುವ ಬಗ್ಗೆ ಸರ್ಕಾರ ಆದೇಶ ನೀಡಿದೆ.

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡುವಂತಾಗಿದೆ. ಇಂಥ ಸಂದರ್ಭದಲ್ಲಿ ಸಾವಿರಾರು ಹಣ ವಸೂಲಿ ಮಾಡುತ್ತಿರುವುದು ಕಾರ್ಮಿಕರಿಗೆ ತೀವ್ರ ಸಂಕಷ್ಟಕ್ಕೀಡು ಮಾಡಿದೆ.

https://youtu.be/qewXgOd1xXc
ಉಡುಪಿಯಲ್ಲಿ ಊರು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ

ಉಡುಪಿಯಿಂದ ಗಜೇಂದ್ರಗಡಕ್ಕೆ ಬರಲು 1500 ಹಣ ಪಡೆಯಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ. ಇಂತಹ ಸಂದಿಗ್ಧತೆಯಲ್ಲಿ ತುತ್ತಿನ ಚೀಲ ತುಂಬಿಕೊಳ್ಳಲು ಪರದಾಡಬೇಕಾದ ಕಾರ್ಮಿಕರು ಅದು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೊಡುವುದು ಹೇಗೆ? ಎಂಬ ಪ್ರಶ್ನೆ ಉದ್ಭವವಾಗಿದೆ.

ಇಡೀ ದೇಶವೇ ಈಗ ಸಂಕಷ್ಟದಲ್ಲಿದೆ. ಮದ್ಯಮ ಹಾಗೂ ಬಡ ಕುಟುಂಬಗಳು ಸ್ಥಿತಿ ಹೇಳತೀರದಾಗಿದೆ. ಇಂಥ ಪರಿಸ್ಥಿತಿಯಲ್ಲಿ ಒಪ್ಪತ್ತಿನೂಟಕ್ಕೆ ದುಡಿಮೆಯನ್ನೆ ನಂಬಿರುವ ಬಡ ಕಾರ್ಮಿಕರು ಊರು ಸೇರುವುದು ಹೇಗೆ? ಹಣದ ತೊಂದರೆಯಿಂದಾಗಿ ಜನ ತಮ್ಮ ಊರು ತಲುಪುವುದು ಕಷ್ಟವಾಗಿದೆ. ಕೂಡಲೇ ಅಧಿಕಾರಿಗಳು ಸಂಕಷ್ಟದಲ್ಲಿರುವ ಕಾರ್ಮಿಕರ ನೋವಿಗೆ ಸ್ಪಂದಿಸಿ ಅವರನ್ನು ಊರು ತಲುಪಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅಶೋಕ ಲಮಾಣಿ ಒತ್ತಾಯಿಸಿದ್ದಾರೆ.   

ಈಗಾಗಲೇ ಹೊಗಿ-ಬರುವ ಬಸ್ ದರ ಸೇರಿ 1000 ರೂ ಆಗುತ್ತದೆ. ಆದರೆ 1500 ಏಕೆ? ಎನ್ನುವುದು ಕಾರ್ಮಿಕರ ಪ್ರಶ್ನೆ. ಇನ್ನು ಮುಖ್ಯವಾಗಿ ಇಂಥ ಪರಿಸ್ಥಿತಿಯಲ್ಲಿ ಒಬ್ಬ ಕಾರ್ಮಿಕ ಊರು ಸೇರಲು ಹೋಗಿ-ಬರುವ ದರವನ್ನು ಪಾವತಿಸಬೇಕು ಎಂದರೆ ಕಷ್ಟ ಸಾಧ್ಯವೆ ಸರಿ?. ಇದರಿಂದಾಗಿ ನೂರಾರು ಕಾರ್ಮಿಕರು ಊರು ಸೇರುವುದು ಹೇಗೆ? ಎನ್ನುವ ಚಿಂತೆಯಲ್ಲಿದ್ದಾರೆ. ಕೂಡಲೇ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ದುಡಿಯುವ ವರ್ಗದ ನೆರವಿಗೆ ಧಾವಿಸಬೇಕಾದ ಅನಿವಾರ್ಯತೆ ಇದೆ.

2 comments
Leave a Reply

Your email address will not be published. Required fields are marked *

You May Also Like

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ಜಕ್ಕಲಿಯಲ್ಲಿ ಹೀಗೊಂದು ವಿಶಿಷ್ಟ ಹೋಳಿ ಹುಣ್ಣಿಮೆ ಆಚರಣೆ

ವಸಂತ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣುಮೆ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮ ಹಿಂದೂ ಧರ್ಮದ ಪ್ರಕಾರ ಹೋಳಿ ಒಂದು ಮಹತ್ವಪೂರ್ಣ ಮಹಾಪರ್ವ ಎಂದು ಭಾವಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮಾ.29 ಸೋಮವಾರ ಹೋಳಿ ಹಬ್ಬವನ್ನು ಹಾಗೂ ಕಾಮ ದಹನವನ್ನು ಮಾ.28 ಆಚರಿಸಲಾಗುತ್ತದೆ.

ರಶ್ಮಿಕಾ ಜಾಗಕ್ಕೆ ಬಂದು ನಿಂತ ಸಾಯಿ ಪಲ್ಲವಿ!

ಹೈದರಾಬಾದ್ : ದಕ್ಷಿಣ ಭಾರತ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ಸದ್ಯ ತೆಲುಗು, ತಮಿಳು ಚಿತ್ರರಂಗದಲ್ಲಿ…