ಕೊರೋನಾ ಕಾವ್ಯ-5ನೇ ಸರಣಿಯಲ್ಲಿಂದು ಗದಗಿನ ಸಾಹಿತಿ ನಿರಂತರ ಸಾಹಿತ್ಯ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಎ.ಎಸ್.ಮಕಾನದಾರ್ ಅವರು ರಚಿಸಿದ ಕವನ. ಪ್ರಸ್ತುತ ಸಂದರ್ಭದಲ್ಲಿ ಮಕಾನದಾರ್ ಅವರ ಕಾವ್ಯ ಆ ಕಾಲಕ್ಕೆ ಕಾಯುವೆ ಶಿರ್ಷಿಕೆಯೇ ಸೂಚಿಸುತ್ತದೆ ಅವರ ಕಾವ್ಯದಲ್ಲಿನ ಕನಸು ಹಾಗೂ ಹಂಬಲ. ಇಂದಿನ ದಿನಮಾನದಲ್ಲಿ ವಾಸ್ತವಕ್ಕೆ ಹತ್ತಿರವಾಗುವಂತಹ ಮನಸು ಕಟ್ಟುವ ಕಾವ್ಯವವನ್ನಿಲ್ಲಿ ಕಟ್ಟಿಕೊಟ್ಟಿದ್ದಾರೆ. .

ಆ ಕಾಲಕ್ಕೆ ಕಾಯುವೆ

ಮಸೀದೆಯ ಅಜಾನ್
ಚರ್ಚ್ ನಲ್ಲಿ ಕೇಳಬೇಕು

ಚರ್ಚ್ ನಲ್ಲಿಯ ಪ್ರಾರ್ಥನೆ
ಮಂದಿರ ದಲ್ಲಿ ಜರುಗಬೇಕು

ಮಂದಿರ ದಲ್ಲಿ ಸೇರಿದ ಜನ
ಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕು

ನನ್ನ ಕಾಯ
ಕರ್ಪುರ ವಾಗಬೇಕು

ಮಂದಿರ ಮಸೀದೆ
ಚರ್ಚ್ ನಲ್ಲಿ ಬೆಳಗಬೇಕು

ನರನಾಡಿಗಳು
ನೀಲಾಂಜನಕೆ ಬತ್ತಿ ಯಾಗಬೇಕು

ರಕುತ ಎಣ್ಣಿಯಾಗಬೇಕು
ಮನಸು ಬೆಣ್ಣಿಯಂತೆ ಕರಗಬೇಕು

ಆ ಕಾಲಕ್ಕಾಗಿ ನನ್ನ
ಕಣ್ಣುಗಳು ಕಾಯಬೇಕು

ಎ.ಎಸ್. ಮಕಾನದಾರ ಗದಗ

Leave a Reply

Your email address will not be published. Required fields are marked *

You May Also Like

ಗೃಹ ಸಚಿವರಿಗೂ ಕೊರೊನ ಪಾಸಿಟಿವ್!

ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಟಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆ ಭಾನುವಾರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ…

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಲಾಕ್ ಡೌನ್ ಎಡವಟ್ಟು : ತವರಿಂದ ಬಂದ ಪತ್ನಿಗೆ ಪತಿಯಿಂದ ಲಾಕ್ಔಟ್!

ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ…