ಕೊರೋನಾ ಕಾವ್ಯ-5ನೇ ಸರಣಿಯಲ್ಲಿಂದು ಗದಗಿನ ಸಾಹಿತಿ ನಿರಂತರ ಸಾಹಿತ್ಯ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಎ.ಎಸ್.ಮಕಾನದಾರ್ ಅವರು ರಚಿಸಿದ ಕವನ. ಪ್ರಸ್ತುತ ಸಂದರ್ಭದಲ್ಲಿ ಮಕಾನದಾರ್ ಅವರ ಕಾವ್ಯ ಆ ಕಾಲಕ್ಕೆ ಕಾಯುವೆ ಶಿರ್ಷಿಕೆಯೇ ಸೂಚಿಸುತ್ತದೆ ಅವರ ಕಾವ್ಯದಲ್ಲಿನ ಕನಸು ಹಾಗೂ ಹಂಬಲ. ಇಂದಿನ ದಿನಮಾನದಲ್ಲಿ ವಾಸ್ತವಕ್ಕೆ ಹತ್ತಿರವಾಗುವಂತಹ ಮನಸು ಕಟ್ಟುವ ಕಾವ್ಯವವನ್ನಿಲ್ಲಿ ಕಟ್ಟಿಕೊಟ್ಟಿದ್ದಾರೆ. .

ಆ ಕಾಲಕ್ಕೆ ಕಾಯುವೆ

ಮಸೀದೆಯ ಅಜಾನ್
ಚರ್ಚ್ ನಲ್ಲಿ ಕೇಳಬೇಕು

ಚರ್ಚ್ ನಲ್ಲಿಯ ಪ್ರಾರ್ಥನೆ
ಮಂದಿರ ದಲ್ಲಿ ಜರುಗಬೇಕು

ಮಂದಿರ ದಲ್ಲಿ ಸೇರಿದ ಜನ
ಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕು

ನನ್ನ ಕಾಯ
ಕರ್ಪುರ ವಾಗಬೇಕು

ಮಂದಿರ ಮಸೀದೆ
ಚರ್ಚ್ ನಲ್ಲಿ ಬೆಳಗಬೇಕು

ನರನಾಡಿಗಳು
ನೀಲಾಂಜನಕೆ ಬತ್ತಿ ಯಾಗಬೇಕು

ರಕುತ ಎಣ್ಣಿಯಾಗಬೇಕು
ಮನಸು ಬೆಣ್ಣಿಯಂತೆ ಕರಗಬೇಕು

ಆ ಕಾಲಕ್ಕಾಗಿ ನನ್ನ
ಕಣ್ಣುಗಳು ಕಾಯಬೇಕು

ಎ.ಎಸ್. ಮಕಾನದಾರ ಗದಗ

Leave a Reply

Your email address will not be published. Required fields are marked *

You May Also Like

ಮೇ. 17ರ ನಂತರ ಲಾಕ್ ಡೌನ್ ಸ್ಥಿತಿ ಹೇಗಿರಲಿದೆ?

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ…

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಷ : ಪೇಂಟರ್ ಸಾವು

ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.…

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ(NSUI)ಉಪವಾಸ ಸತ್ಯಾಗ್ರಹ

ಉತ್ತರಪ್ರಭ ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ…