ಚೆನ್ನೈ: ಇಲ್ಲಿಯ ಬೀದಿಯೊಂದರಲ್ಲಿಯೇ ದಾಖಲೆಯ 42 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ವಿಆರ್ ಪಿಲೈ ಬೀದಿಯಲ್ಲಿ ಟಿ, ಕಾಫಿ ಮತ್ತಿತರ ಸ್ನ್ಯಾಕ್ಸ್ ವಿತರಿಸುತ್ತಿದ್ದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಆನಂತರ ಇಡೀ ಬೀದಿಗೆ ಅಂಟಿಕೊಂಡಿದೆ. ಸದ್ಯ ಬರೋಬ್ಬರಿ 42 ಜನರನ್ನು ಅದು ತಲುಪಿದೆ.
ಸೋಂಕಿನ ಮೂಲವೆಂದು ಶಂಕಿಸಲಾಗಿರುವ ಎರಡು ಪ್ರಾಥಮಿಕ ಪ್ರಕರಣಗಳ ವ್ಯಕ್ತಿಗಳು 35 ಮತ್ತು 49 ವಯಸ್ಸಿನವರಾಗಿದ್ದು, ವಿಆರ್ ಪಿಲೈ ಸ್ಟ್ರೀಟ್ ನಿವಾಸಿಯಾಗಿದ್ದಾರೆ. ಬೇಯಿಸಿದ ಆಹಾರ ವಿತರಿಸುವುದನ್ನು ಪಾಲಿಕೆ ತಡೆಗಟ್ಟಿದ್ದರೂ ಇವರಿಬ್ಬರೂ ಒಟ್ಟಾಗಿ ಬೇಯಿಸಿದ ಆಹಾರವನ್ನು ವಿತರಿಸುತ್ತಿದ್ದರು ಎನ್ನಲಾಗಿದೆ.
ಇವರಿಬ್ಬರೂ ಹೇಗೆ ಸೋಂಕಿಗೆ ತುತ್ತಾದರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅವರು ಚೆನ್ನೈ ನಗರದಲ್ಲಿ ಸ್ವಲ್ಪ ಅಡ್ಡಾಡಿರುವುದಾಗಿ ತಿಳಿಸಿದ್ದು, ಸದ್ಯ ಎಲ್ಲರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಕಾರ್ಪೋರೇಷನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.