ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…