ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 39,980ಕ್ಕೆ ಏರಿಕೆ ಕಂಡಿದೆ. ಈ ಮಹಾಮಾರಿಗೆ 1,301 ಜನ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ದೇಶದಲ್ಲಿ 2067 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ 71 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ 10,017 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇಲ್ಲಿಯವರೆಗೂ ದೇಶದಲ್ಲಿ 10 ಲಕ್ಷ ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 790 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 12,296ಕ್ಕೆ ತಲುಪಿದೆ. ಜೊತೆಗೆ ರಾಜ್ಯದಲ್ಲಿ 36 ಜನ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 521ಕ್ಕೆ ತಲುಪಿದೆ.

ಗುಜರಾತ್ ನಲ್ಲಿ 353 ಹೊಸ ಪ್ರಕರಣಗಳು ದಾಖಲಾಗಿವೆ. ಸೋಂಕಿತರ ಸಂಖ್ಯೆ 5054ಕ್ಕೆ ಏರಿಕೆ ಕಂಡಿದೆ. ಒಂದೇ ದಿನ 26 ಜನ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 262ಕ್ಕೆ ತಲುಪಿದೆ. ತಮಿಳುನಾಡಿನಲ್ಲಿ ಶನಿವಾರ 231 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ಲಾಕ್ ಡೌನ್ ನಲ್ಲಿ ಹುಟ್ಟಿದ ಮಕ್ಕಳಿಗೆ ಕ್ವಾರಂಟೈನ್, ಸ್ಯಾನಿಟೈಸರ್ ಎಂದು ನಾಮಕರಣ!

ಭೋಪಾಲ್: ಲಾಕ್ ಡೌನ್ ಸಂದರ್ಭದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ಕ್ವಾರಂಟೈನ್ ಹಾಗೂ ಸ್ಯಾನಿಟೈಸರ್ ಎಂದು ಹೆಸರಿಟ್ಟಿರುವ…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.