ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 39,980ಕ್ಕೆ ಏರಿಕೆ ಕಂಡಿದೆ. ಈ ಮಹಾಮಾರಿಗೆ 1,301 ಜನ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ದೇಶದಲ್ಲಿ 2067 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ 71 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ 10,017 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇಲ್ಲಿಯವರೆಗೂ ದೇಶದಲ್ಲಿ 10 ಲಕ್ಷ ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 790 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 12,296ಕ್ಕೆ ತಲುಪಿದೆ. ಜೊತೆಗೆ ರಾಜ್ಯದಲ್ಲಿ 36 ಜನ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 521ಕ್ಕೆ ತಲುಪಿದೆ.

ಗುಜರಾತ್ ನಲ್ಲಿ 353 ಹೊಸ ಪ್ರಕರಣಗಳು ದಾಖಲಾಗಿವೆ. ಸೋಂಕಿತರ ಸಂಖ್ಯೆ 5054ಕ್ಕೆ ಏರಿಕೆ ಕಂಡಿದೆ. ಒಂದೇ ದಿನ 26 ಜನ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 262ಕ್ಕೆ ತಲುಪಿದೆ. ತಮಿಳುನಾಡಿನಲ್ಲಿ ಶನಿವಾರ 231 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ

ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ?

ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…