ಆತ್ಮಿಯರೆ

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಸಾಹಿತಿ ಎ.ಎಸ್.ಮಕಾನದಾರ್

ಹೊಸ ಹೆಜ್ಜೆ ಹಾಕುತ ಬಾ

ಕರಕಲಾದ ಕಾನನದಲಿ ಹೊರ ಗರಿಕೆಯಾಗಿ ಬಾ

ಒಣಗಿದ ಮರದಲಿ ಚಿಗುರೊಡೆದು ಬಾ

ಬಾಡಿದ ಬಳ್ಳಿಯಲಿ ಮೊಗ್ಗಾಗಿ ಬಾ

ಕಾಡು ಮಲ್ಲಿಗೆಯೆ ಸುಗಂಧ ಸೂಸುತ ಬಾ

ಮಿಂಚಾಗಿ ಬಾ

ಕಾಮನ ಬಿಲ್ಲಾಗಿ ಬಾ

ಇಳೆಗೆ ಮುಂಗಾರು ಮಳೆಯಾಗಿ ಬಾ

ತಂಗಾಳಿ ಸೂಸುತ ಬಾ

ತುಂತುರು ಮಳೆಯಂತಾದರೂ ಬಾ

ಜಡಿಮಳೆಯಂತಾದರೂ ಬಾ

ಕಾದ ಮನ ಸಿಂಚನಗೊಳಿಸು ಬಾ

ಇಂಪಾದ ಸಂಗೀತದಂತೆ ಬಾ

ಅಹಮಿಕೆಯ ಕೋಟೆ ಒಡೆದು ಬಾ

ಬಿಸಿಲ ಬದುಕಿಗೆ ನೆರಳಾಗಿ ಬಾ

ಕಣ್ಮಿಂಚಿನ ಆಸೆಯಾಗಿ ಬಾ

ಎದೆಯೊಳಗಿನ ಗೂಡೊಳಗೆ ಬೆಚ್ಚಗೆ ಕುಳಿತುಕೋ ಬಾ

ಹಂಸ ಕ್ಷೀರದಂತಾಗಿಯಾದರೂ ಬಾ

ಕೇಡಿಲ್ಲದ ನುಡಿಯಾಗಿಯಾದರೂ ಬಾ

ಕಣ್ಣೀರು ಒರೆಸುವ ಕೈಯಾಗಿಯಾದರೂ ಬಾ

ಕೈತುತ್ತು ತಿನಿಸುವ ಮಾತೆಯಾಗಿಯಾದರೂ ಬಾ

ಕವನವಾಗಿಯಾದರೂ ಬಾ

ಸಖಿಯಾಗಿ ಸಾಕಿಯಾಗಿಯಾದರೂ ಬಾ

ಹಂಗಿಲ್ಲದ ಬದುಕು ಕಟ್ಟಲು ಹಪಹಪಿಸುತ ಬಾ

ಜೊತೆಗೆ ಹೊಸ ಹೆಜ್ಜೆ ಹಾಕುತ ಬಾ  

ಎ.ಎಸ್.ಮಕಾನದಾರ್, ಸಾಹಿತಿ ಗದಗ

Leave a Reply

Your email address will not be published. Required fields are marked *

You May Also Like

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಟಿಕ್ ಟಾಕ್ ಬ್ಯಾನ್ ಗೆ ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಭಾಷಣ ನಿಲ್ಲಿಸಿ, ಕೆಲಸ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…