ಆತ್ಮಿಯರೆ

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಸಾಹಿತಿ ಎ.ಎಸ್.ಮಕಾನದಾರ್

ಹೊಸ ಹೆಜ್ಜೆ ಹಾಕುತ ಬಾ

ಕರಕಲಾದ ಕಾನನದಲಿ ಹೊರ ಗರಿಕೆಯಾಗಿ ಬಾ

ಒಣಗಿದ ಮರದಲಿ ಚಿಗುರೊಡೆದು ಬಾ

ಬಾಡಿದ ಬಳ್ಳಿಯಲಿ ಮೊಗ್ಗಾಗಿ ಬಾ

ಕಾಡು ಮಲ್ಲಿಗೆಯೆ ಸುಗಂಧ ಸೂಸುತ ಬಾ

ಮಿಂಚಾಗಿ ಬಾ

ಕಾಮನ ಬಿಲ್ಲಾಗಿ ಬಾ

ಇಳೆಗೆ ಮುಂಗಾರು ಮಳೆಯಾಗಿ ಬಾ

ತಂಗಾಳಿ ಸೂಸುತ ಬಾ

ತುಂತುರು ಮಳೆಯಂತಾದರೂ ಬಾ

ಜಡಿಮಳೆಯಂತಾದರೂ ಬಾ

ಕಾದ ಮನ ಸಿಂಚನಗೊಳಿಸು ಬಾ

ಇಂಪಾದ ಸಂಗೀತದಂತೆ ಬಾ

ಅಹಮಿಕೆಯ ಕೋಟೆ ಒಡೆದು ಬಾ

ಬಿಸಿಲ ಬದುಕಿಗೆ ನೆರಳಾಗಿ ಬಾ

ಕಣ್ಮಿಂಚಿನ ಆಸೆಯಾಗಿ ಬಾ

ಎದೆಯೊಳಗಿನ ಗೂಡೊಳಗೆ ಬೆಚ್ಚಗೆ ಕುಳಿತುಕೋ ಬಾ

ಹಂಸ ಕ್ಷೀರದಂತಾಗಿಯಾದರೂ ಬಾ

ಕೇಡಿಲ್ಲದ ನುಡಿಯಾಗಿಯಾದರೂ ಬಾ

ಕಣ್ಣೀರು ಒರೆಸುವ ಕೈಯಾಗಿಯಾದರೂ ಬಾ

ಕೈತುತ್ತು ತಿನಿಸುವ ಮಾತೆಯಾಗಿಯಾದರೂ ಬಾ

ಕವನವಾಗಿಯಾದರೂ ಬಾ

ಸಖಿಯಾಗಿ ಸಾಕಿಯಾಗಿಯಾದರೂ ಬಾ

ಹಂಗಿಲ್ಲದ ಬದುಕು ಕಟ್ಟಲು ಹಪಹಪಿಸುತ ಬಾ

ಜೊತೆಗೆ ಹೊಸ ಹೆಜ್ಜೆ ಹಾಕುತ ಬಾ  

ಎ.ಎಸ್.ಮಕಾನದಾರ್, ಸಾಹಿತಿ ಗದಗ

Leave a Reply

Your email address will not be published. Required fields are marked *

You May Also Like

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ!

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ…

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ನಿಡಗುಂದಿಯಲ್ಲಿ ಬಿ.ಇಡಿ.ಪ್ರಶಿಕ್ಷಣಾಥಿ೯ಗಳಿಗೆ ಸ್ವಾಗತ- ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ರೂಪ

ನಿಡಗುಂದಿ: ಶಿಕ್ಷಣದ ಉದ್ದೇಶ ಒಳ್ಳೇಯ ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು. ತರಗತಿ ಪಠ್ಯಕ್ರಮವನ್ನು ಅಭ್ಯಸಿಸುವದರ ಜೊತೆಗೆ ಸಾಮಾಜಿಕ…

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ…