ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಪೊಲೀಸರ ಸೇವೆ ಅಷ್ಟಿಷ್ಟಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಪೊಲೀಸರು ಪಟ್ಟ ಶ್ರಮಕ್ಕೆ ಬೆಲೆ ಕಟ್ಟೋಕೆ ಆಗಲ್ಲ. ಆ ಕಾರಣದಿಂದ ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬಮ್ಮಾಪುರ ಓಣಿಯ ಜನರು ಸೇರಿಕೊಂಡು ಘಂಟಿಕೇರಿ ಪೋಲಿಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ದಸ್ರು ಗೆ ಗೌರವ ಸಲ್ಲಿಸಿದರು.

          ಪೋಲಿಸ್ ಠಾಣೆಗೆ ತೆರಳಿ ದೀಪ ಬೆಳಗಿ, ಟೆಂಗಿನಕಾಯಿ ಒಡೆದು ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದರು.

ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಲಾಯಿತು.

      ಕೊರೊನಾ ವೈರಸ್ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಸುವುದರ ಜೊತೆಗೆ ಮನೆಯಿಂದ ಯಾರು ಹೊರಬರದಂತೆ ಪೋಲಿಸ್ ಸಿಬ್ಬಂದಿ ಅವಿರಿತ ಶ್ರಮ ವಹಿಸಿದ್ದಾರೆ. ಹೀಗಾಗಿ ಪೋಲಿಸ್ ಠಾಣೆಯೂ ಕೂಡ ನಮಗೆ ದೇವಸ್ಥಾನ ವಿದ್ದಂತೆ. ಈ ಕಾರಣದಿಂದ ನಾವು ಇವತ್ತು ಪೋಲಿಸ್ ಠಾಣೆಗೆ ಬಂದು ವಿಶೇಷ ಪೂಜೆ ಸಲ್ಲಿಸಿರುವುದಾಗಿ ಸ್ಥಳೀಯ ನಿವಾಸಿ ಮಂಜುನಾಥ ಯಂಟ್ರುವಿ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.