ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ 98 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತಪಟ್ಟವರ ಸಂಖ್ಯೆ 1,306ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು ಸೋಂಕಿತರ ಪೈಕಿ ಈ ವರೆಗೂ 11,204 ಜನ ಗುಣಮುಖರಾಗಿದ್ದಾರೆ.

ದೇಶದಲ್ಲಿ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡ ಮಹಾರಾಷ್ಟ್ರದಲ್ಲಿ ಮತ್ತೆ 678 ಪ್ರಕರಣಗಳು 24 ಗಂಟೆಗಳಲ್ಲಿ ದಾಖಲಾಗಿವೆ. ಇಲ್ಲಿ ಕೊರೋನಾ ಪೀಡಿತರ ಸಂಖ್ಯೆ 12,974 ಆಗಿದ್ದು, ಬಲಿಯಾದವರ ಸಂಖ್ಯೆ 548ಕ್ಕೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಭಾನುವಾರ 427, ಗುಜರಾತ್ ನಲ್ಲಿ 974, ತಮಿಳುನಾಡಿನಲ್ಲಿ 266 ಹೊಸ ಪ್ರಕರಣಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾದಂತಹ ಗಂಡಾಂತರಗಳು ಇನ್ನೂ ಇವೆಯಂತೆ!

ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.