ಬೆಂಗಳೂರು: ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ.

ಬಾರ್ ಓಪನ್ ಮಾಡುತ್ತಿರುವುದಕ್ಕೆ ಮದ್ಯ ಸಿಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ ವ್ಯಕ್ತಪಡಿಸುತ್ತಿದ್ದಾರೆ. ಒಂದೊಂದು ಬಾರ್ ಮುಂದೆ ಕ್ಯೂ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಬೆಳಿಗ್ಗೆ 4 ರಿಂದಲೇ ಎಣ್ಣೆ ಪ್ರಿಯರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಿಯಮಗಳನ್ನು ಪಾಲಿಸಿಯೇ ಎಣ್ಣೆ ಖರೀದಿಸುತ್ತೇವೆ ಎಂದು ಹೇಳಿದ್ದಾರೆ.

ಸದ್ಯ ಒಬ್ಬರಿಗೆ ಎರಡೇ ಲೀಟರ್ ಮದ್ಯ ಸಿಗಲಿದ್ದು, ಬೆಳಿಗ್ಗೆ 9 ರಿಂದ ಸಂಜೆ 7ರ ತನಕ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬಾರ್ ಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬ್ಯಾರಿಕೇಡ್ ನಿರ್ಮಿಸಲಾಗಿದೆ. ಅಲ್ಲದೇ, ಸರತಿಯಲ್ಲಿ ನಿಲ್ಲಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಾಕ್ಸ್ ಗಳನ್ನು ಕೂಡ ಹಾಕಲಾಗಿದೆ.

Leave a Reply

Your email address will not be published. Required fields are marked *

You May Also Like

ಪಾಸ್ ಬುಕ್ ಮೇಲಿದ್ದ ಕನ್ನಡ ಮಾಯವಾಗಿದ್ದೇಕೆ?

ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಈ ಹಿಂದೆ…

ಗದಗ ಜಿಲ್ಲೆಯಲ್ಲಿಂದು 18 ಪಾಸಿಟಿವ್! : ಯಾವ ಯಾವ ತಾಲೂಕಿಗೆ ಕೊರೊನಾ ನಂಟು?

ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಹೊಸ ಬಸ್ ನಿಲ್ದಾಣ ಹತ್ತಿರದ ನಿವಾಸಿ 40…

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.