ಗದಗ: ಈಗಾಗಲೇ ಕಳೆದ ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ. ಗದಗ ಜಿಲ್ಲೆಯಲ್ಲಿ ಇಂದು ಇಂತಹ ದೃಷ್ಯಗಳು ಬಹುತೇಕ ಬಾರ್ ಗಳ ಮುಂದೆ ಕಂಡು ಬಂದಿತು.

ಗದಗ-ಬೆಟಗೇರಿ ಬಾರ್ ಗಳ ಮುಂದೆ ಜನಜಂಗುಳಿ

ಬಾರ್ ಮಾಲಿಕರಿಗೆ ಸರ್ಕಾರ ಕೆಲವು ನಿಬಂಧನೆಗಳನ್ನು ನೀಡಿದ್ದು ಅದರ ಪ್ರಕಾರ ಮದ್ಯ ಮಾರಾಟ ಮಾಡಲು ಸೂಚಿಸಿದೆ. ಇಂದು ಏಕಾಏಕಿ ಮದ್ಯಪ್ರೀಯರ ಹಾವಳಿ ಹೆಚ್ಚಾಗಬಾರದೆಂಬ ಕಾರಣಕ್ಕೆ ಬಾರ್ ಗಳ ಮುಂದೆ ಸರತಿಯಲ್ಲಿ ಬರಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಬಾಕ್ಸ್ ಗಳನ್ನು ಹಾಕಿ ಸರತಿಯಲ್ಲಿ ಬಂದು ಮದ್ಯೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಗದಗ-ಬೆಟಗೇರಿ ಅವಳಿ ನಗರದಲ್ಲೂ 4 ಗಂಟೆಯಿಂದಲೇ ಬಹುತೇಕ ಬಾರ್ ಗಳ ಎದುರು ಸಾರಾಯಿಗಾಗಿ ಜನ ಕಾಯುತ್ತಿರುವ ದೃಷ್ಯಗಳು ಕಂಡು ಬಂದವು. ಮುಂಜಾಗೃತ ಕ್ರಮವಾಗಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ವಿಶ್ವ ಸಂಸ್ಥೆ ಭದ್ರತಾ ಸಮಿತಿಗೆ ಭಾರತ ತಾತ್ಕಾಲಿಕ‌ ಸದಸ್ಯ

ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ…