ಗದಗ: ಈಗಾಗಲೇ ಕಳೆದ ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ. ಗದಗ ಜಿಲ್ಲೆಯಲ್ಲಿ ಇಂದು ಇಂತಹ ದೃಷ್ಯಗಳು ಬಹುತೇಕ ಬಾರ್ ಗಳ ಮುಂದೆ ಕಂಡು ಬಂದಿತು.

ಗದಗ-ಬೆಟಗೇರಿ ಬಾರ್ ಗಳ ಮುಂದೆ ಜನಜಂಗುಳಿ

ಬಾರ್ ಮಾಲಿಕರಿಗೆ ಸರ್ಕಾರ ಕೆಲವು ನಿಬಂಧನೆಗಳನ್ನು ನೀಡಿದ್ದು ಅದರ ಪ್ರಕಾರ ಮದ್ಯ ಮಾರಾಟ ಮಾಡಲು ಸೂಚಿಸಿದೆ. ಇಂದು ಏಕಾಏಕಿ ಮದ್ಯಪ್ರೀಯರ ಹಾವಳಿ ಹೆಚ್ಚಾಗಬಾರದೆಂಬ ಕಾರಣಕ್ಕೆ ಬಾರ್ ಗಳ ಮುಂದೆ ಸರತಿಯಲ್ಲಿ ಬರಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಬಾಕ್ಸ್ ಗಳನ್ನು ಹಾಕಿ ಸರತಿಯಲ್ಲಿ ಬಂದು ಮದ್ಯೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಗದಗ-ಬೆಟಗೇರಿ ಅವಳಿ ನಗರದಲ್ಲೂ 4 ಗಂಟೆಯಿಂದಲೇ ಬಹುತೇಕ ಬಾರ್ ಗಳ ಎದುರು ಸಾರಾಯಿಗಾಗಿ ಜನ ಕಾಯುತ್ತಿರುವ ದೃಷ್ಯಗಳು ಕಂಡು ಬಂದವು. ಮುಂಜಾಗೃತ ಕ್ರಮವಾಗಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಓದುವ ಬೆಳಕು : ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ

ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಕಾಂದಬರಿ…

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…

ಶಿಕ್ಷಕ ಸ್ನೇಹಿ ಸಚಿವ ನಾಗೇಶ್ ಗೆ ಅಭಿನಂದಿಸಿದ ಶಿಕ್ಷಕರ ಸಂಘ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ…

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.