ಗದಗ: ಈಗಾಗಲೇ ಕಳೆದ ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ. ಗದಗ ಜಿಲ್ಲೆಯಲ್ಲಿ ಇಂದು ಇಂತಹ ದೃಷ್ಯಗಳು ಬಹುತೇಕ ಬಾರ್ ಗಳ ಮುಂದೆ ಕಂಡು ಬಂದಿತು.

ಗದಗ-ಬೆಟಗೇರಿ ಬಾರ್ ಗಳ ಮುಂದೆ ಜನಜಂಗುಳಿ

ಬಾರ್ ಮಾಲಿಕರಿಗೆ ಸರ್ಕಾರ ಕೆಲವು ನಿಬಂಧನೆಗಳನ್ನು ನೀಡಿದ್ದು ಅದರ ಪ್ರಕಾರ ಮದ್ಯ ಮಾರಾಟ ಮಾಡಲು ಸೂಚಿಸಿದೆ. ಇಂದು ಏಕಾಏಕಿ ಮದ್ಯಪ್ರೀಯರ ಹಾವಳಿ ಹೆಚ್ಚಾಗಬಾರದೆಂಬ ಕಾರಣಕ್ಕೆ ಬಾರ್ ಗಳ ಮುಂದೆ ಸರತಿಯಲ್ಲಿ ಬರಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಬಾಕ್ಸ್ ಗಳನ್ನು ಹಾಕಿ ಸರತಿಯಲ್ಲಿ ಬಂದು ಮದ್ಯೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಗದಗ-ಬೆಟಗೇರಿ ಅವಳಿ ನಗರದಲ್ಲೂ 4 ಗಂಟೆಯಿಂದಲೇ ಬಹುತೇಕ ಬಾರ್ ಗಳ ಎದುರು ಸಾರಾಯಿಗಾಗಿ ಜನ ಕಾಯುತ್ತಿರುವ ದೃಷ್ಯಗಳು ಕಂಡು ಬಂದವು. ಮುಂಜಾಗೃತ ಕ್ರಮವಾಗಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ಕು ಜನರ ಸಾಮೂಹಿಕ ಅಂತ್ಯಸಂಸ್ಕಾರ ಸಂಸ್ಕಾರ ಮಾಡಿದ ಬಿನ್ನಾಳ ಗ್ರಾಮಸ್ಥರು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಒಂದೇ…

ಮನಸ್ಸೆಂಬ ಮಾಯೆಯೂ ಮತ್ತು ಸಮಾಜ ವಿರೋಧಿ ಸೀಲೂ…!!!

ಯಾರೋ ಒಬ್ಬರು ಚೈನ್ ಸ್ಮೋಕರ್ ಒಬ್ಬನನ್ನು ಕೇಳಿದರಂತೆ…, ಏನ್ರೀ ಅಷ್ಟೊಂದು ಸಿಗರೇಟ್ ಸೇದತೀರಾ ಅಂತ? ಅದಕ್ಕೆ ಆ ಚೈನ್ ಸ್ಮೋಕರ್ ಹೇಳಿದ್ದು..