ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು, ಅಗತ್ಯ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚ ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಡವರಿಗೆ ಕಾಂಗ್ರೆಸ್ ನ ವಿನಮ್ರ ಕೊಡುಗೆ ಇದು. ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಬಡವರು ತಾವು ದುಡಿಯುತ್ತಿದ್ದ ಸ್ಥಳದಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ, ಅವರಿಗೆ ಕೆಲಸವೂ ಇಲ್ಲದ ಕಾರಣ ಕೈಯಲ್ಲಿ ಹಣವಿಲ್ಲ. ಈ ಕಾರಣಕ್ಕೆ ಅವರ ಸಹಾಯಕ್ಕೆ ಕಾಂಗ್ರೆಸ್ ಮುಂದೆ ಬಂದಿದೆ ಎಂದು ಹೇಳಿದ್ದಾರೆ.

ವಿದೇಶಗಳಲ್ಲಿ ಸಿಲುಕಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ಆಸಕ್ತಿ ತೋರಿಸುವ ನಮ್ಮ ಸರ್ಕಾರ, ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಖಾಳಜಿ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

1 comment
  1. Hatsp to congress party up comming to the one step keep it up for public at large

Leave a Reply

Your email address will not be published. Required fields are marked *

You May Also Like

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನರಾಗಿದ್ದಾರೆ.

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅಪ್ಪಂದಿರ ದಿನಾಚರಣೆ ನಿಮಿತ್ಯ ಕವನ- ನನ್ನಪ್ಪ

ಜೀವನದುದ್ದಕ್ಕೂ ತನ್ನ ಗುಡಸಲಿನಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ ಮೈ…

ಸೆಗಣಿಗೆ ಶುಕ್ರದೆಸೆ: ಖರೀದಿಗೆ ಮುಂದಾದ ಸರ್ಕಾರ

ರಾಯಪುರ್: ಒಂದು ಕೆಜಿ ಸೆಗಣಿಗೆ 1.50 ರೂ! ಎಷ್ಟಿದೆ ತನ್ನಿ, ನಾವ್ ತಗಳ್ತೀವಿ. ಅಲಲಾ, ಕೊಟ್ಟಿಗೆ…