ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು, ಅಗತ್ಯ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚ ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಡವರಿಗೆ ಕಾಂಗ್ರೆಸ್ ನ ವಿನಮ್ರ ಕೊಡುಗೆ ಇದು. ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಬಡವರು ತಾವು ದುಡಿಯುತ್ತಿದ್ದ ಸ್ಥಳದಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ, ಅವರಿಗೆ ಕೆಲಸವೂ ಇಲ್ಲದ ಕಾರಣ ಕೈಯಲ್ಲಿ ಹಣವಿಲ್ಲ. ಈ ಕಾರಣಕ್ಕೆ ಅವರ ಸಹಾಯಕ್ಕೆ ಕಾಂಗ್ರೆಸ್ ಮುಂದೆ ಬಂದಿದೆ ಎಂದು ಹೇಳಿದ್ದಾರೆ.

ವಿದೇಶಗಳಲ್ಲಿ ಸಿಲುಕಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ಆಸಕ್ತಿ ತೋರಿಸುವ ನಮ್ಮ ಸರ್ಕಾರ, ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಖಾಳಜಿ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

1 comment
  1. Hatsp to congress party up comming to the one step keep it up for public at large

Leave a Reply

Your email address will not be published. Required fields are marked *

You May Also Like

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಕೊರೊನಾ ಗರ್ಭಿಣಿಯ ಗರ್ಭಪಾತ ಯಶಸ್ವಿ!

ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದ್ದು,ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು.

ಮದ್ಯದಂಗಡಿಗೆ ಪೂಜೆ ಸಲ್ಲಿಸಿದ ಮದ್ಯೆ ವ್ಯಸನಿ

ಮದ್ಯದಂಗಡಿ ಪೂಜೆ ಸಲ್ಲಿಸುವ ಮೂಲಕ ಮದ್ಯ ವ್ಯಸನಿಗಳು ಮದ್ಯಕ್ಕಾಗಿ ಕಾಯುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಮದ್ಯದಂಗಡಿ ಎದುರು ಭದ್ರತಾ ಕ್ರಮ ಕೈಗೊಳ್ಳಲಾಗಿದೆ.

ಗ್ರಾಪಂ ಚುನಾವಣೆ : ಮತಗಟ್ಟೆ ಅಧಿಕಾರಿ ನೇಮಕಕ್ಕೆ ನಿಯಮಗಳು

ವಿದ್ಯುತ್ ಸರಬರಾಜು ಕಂಪನಿಗಳ ಖಾಸಗಿಕರಣ ಸಂಬಂಧ ಕೇಂದ್ರ ಇಂಧನ ಮಂತ್ರಾಲಯವು ಹೊರಡಿಸಿರುವ ಕರಡು(Standard bidding Documents) ಅಭಿಪ್ರಾಯ ನೀಡುವ ಕುರಿತು ಈ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಈ ವಿಷಯವನ್ನು ಪರಿಗಣಿಸಿ, ಎಲ್ಲ ವಿದ್ಉತ್ ಸರಬರಾಜು ಕಂಪನಿಗಳು ಮತ್ತು ಕೆಪಿಟಿಸಿಎಲ್ ರವರಿಂದ ಅಭಿಪ್ರಾಯವನ್ನು ಪಡೆದು ದಿನಾಂಕ 01-10-2020 ರೊಳಗೆ ಕ್ರೂಢಿಕೃತ ಅಭಿಪ್ರಾಯವನ್ನು ಇಂಧನ ಇಲಾಖೆಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಇಂಧನ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿ ಎನ್.ಮಂಗಳಗೌರಿ ಸುತ್ತೋಲೆ ಹೊರಡಿಸಿದ್ದಾರೆ.