ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು, ಅಗತ್ಯ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚ ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಡವರಿಗೆ ಕಾಂಗ್ರೆಸ್ ನ ವಿನಮ್ರ ಕೊಡುಗೆ ಇದು. ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಬಡವರು ತಾವು ದುಡಿಯುತ್ತಿದ್ದ ಸ್ಥಳದಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ, ಅವರಿಗೆ ಕೆಲಸವೂ ಇಲ್ಲದ ಕಾರಣ ಕೈಯಲ್ಲಿ ಹಣವಿಲ್ಲ. ಈ ಕಾರಣಕ್ಕೆ ಅವರ ಸಹಾಯಕ್ಕೆ ಕಾಂಗ್ರೆಸ್ ಮುಂದೆ ಬಂದಿದೆ ಎಂದು ಹೇಳಿದ್ದಾರೆ.

ವಿದೇಶಗಳಲ್ಲಿ ಸಿಲುಕಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ಆಸಕ್ತಿ ತೋರಿಸುವ ನಮ್ಮ ಸರ್ಕಾರ, ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಖಾಳಜಿ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

1 comment
  1. Hatsp to congress party up comming to the one step keep it up for public at large

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ

ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ.…