ಮಂಗಳೂರು: ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೋವಿಡ್‌–19 ವಿರುದ್ಧ ಹೋರಾಡುತ್ತಿರುವ ಯೋಧರಿಗೆ ಭಾರತೀಯ ಕರಾವಳಿ ಕಾವಲು ಪಡೆ ಐಸಿಜಿಯ ವರಹಾ ಒಪಿವಿ ಮತ್ತು ಅಮರ್ತ್ಯಾ ಎಫ್‌ಪಿವಿ ಹಡಗನ್ನು ದೀಪಗಳಿಂದ ಬೆಳಗಿಸುವ ಮೂಲಕ ಇಂಡಿಯಾ ಥ್ಯಾಂಕ್ಸ್ ಕೋವಿಡ್–19 ವಾರಿಯರ್ಸ್ ಎಂದು ಗೌರವ ಸೂಚಿಸಲಾಯಿತು.

ದೀಪಾಲಂಕಾರದ ಮೂಲಕ ಕೊರೋನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸಿದ ದೃಷ್ಯ

ಈ ಹಡಗುಗಳು ಪಣಂಬೂರಿನ ತೀರಕ್ಕೆ ಸಮೀಪ ಬಂದ ಕಾರಣ ಅಂಚಿನಲ್ಲಿ ಹಸಿರು ಬೆಳಕು ಹಾಗೂ ಬೆಳಕಿನ ಚಿತ್ರಣಗಳು ಸುಂದರವಾಗಿ ಗೋಚರಿಸಿದವು.
ಕೋವಿಡ್–19 ವಾರಿಯರ್ಸ್ ಶ್ರಮವನ್ನು ಅಭಿನಂದಿಸಲು ಕರಾವಳಿ ತೀರದ ಸುಮಾರು 25 ಕಡೆಗಳಲ್ಲಿ ಕರಾವಳಿ ಕಾವಲು ಪಡೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದೇಶದಾದ್ಯಂತ ಒಟ್ಟು ಸುಮಾರು 46 ಹಡಗುಗಳು, ಹೆಲಿಕಾಪ್ಟರ್‌ಗಳು ಪಾಲ್ಗೊಂಡಿದ್ದವು.

Leave a Reply

Your email address will not be published. Required fields are marked *

You May Also Like

ಮುಂಡರಗಿಗೆ ಬಿಇಓ ನೇಮಕ, ಶಿರಹಟ್ಟಿ ಬಿಇಓ ವರ್ಗಾವಣೆ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು…

ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜನ್ಮದಿನಾಚರಣೆ ಮಾಡಿದ ಸರ್ಕಾರಿ ಅಧಿಕಾರಿ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ…

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.