ಮಂಗಳೂರು: ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೋವಿಡ್‌–19 ವಿರುದ್ಧ ಹೋರಾಡುತ್ತಿರುವ ಯೋಧರಿಗೆ ಭಾರತೀಯ ಕರಾವಳಿ ಕಾವಲು ಪಡೆ ಐಸಿಜಿಯ ವರಹಾ ಒಪಿವಿ ಮತ್ತು ಅಮರ್ತ್ಯಾ ಎಫ್‌ಪಿವಿ ಹಡಗನ್ನು ದೀಪಗಳಿಂದ ಬೆಳಗಿಸುವ ಮೂಲಕ ಇಂಡಿಯಾ ಥ್ಯಾಂಕ್ಸ್ ಕೋವಿಡ್–19 ವಾರಿಯರ್ಸ್ ಎಂದು ಗೌರವ ಸೂಚಿಸಲಾಯಿತು.

ದೀಪಾಲಂಕಾರದ ಮೂಲಕ ಕೊರೋನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸಿದ ದೃಷ್ಯ

ಈ ಹಡಗುಗಳು ಪಣಂಬೂರಿನ ತೀರಕ್ಕೆ ಸಮೀಪ ಬಂದ ಕಾರಣ ಅಂಚಿನಲ್ಲಿ ಹಸಿರು ಬೆಳಕು ಹಾಗೂ ಬೆಳಕಿನ ಚಿತ್ರಣಗಳು ಸುಂದರವಾಗಿ ಗೋಚರಿಸಿದವು.
ಕೋವಿಡ್–19 ವಾರಿಯರ್ಸ್ ಶ್ರಮವನ್ನು ಅಭಿನಂದಿಸಲು ಕರಾವಳಿ ತೀರದ ಸುಮಾರು 25 ಕಡೆಗಳಲ್ಲಿ ಕರಾವಳಿ ಕಾವಲು ಪಡೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದೇಶದಾದ್ಯಂತ ಒಟ್ಟು ಸುಮಾರು 46 ಹಡಗುಗಳು, ಹೆಲಿಕಾಪ್ಟರ್‌ಗಳು ಪಾಲ್ಗೊಂಡಿದ್ದವು.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಿಗರಿಗೆ ವಿಶೇಷ ಗಿಫ್ಟ್ ನೀಡಿದ ಆರ್ ಸಿಬಿ ತಂಡ!

ದುಬೈ : ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ 11,506ಕ್ಕೆ ಏರಿಕೆ

ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದೆ. ಈವರೆಗೆ ಮಹಾರಾಷ್ಟ್ರದಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಸಂಖ್ಯೆ ಎಷ್ಟು ಗೊತ್ತಾ..?

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.