ಆತ್ಮಿಯರೆ,

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಗಿರಿಜಾ ದಿವಾನ್ ಬಿಸಿಲು ನಾಡು ಎಂದೇ ಪ್ರಸಿದ್ದಿ ಆಗಿರುವ ರಾಯಚೂರು ಜಿಲ್ಲೆಯ ಚಿನ್ನದ ನಾಡಾದ ಹಟ್ಟಿ ಚಿನ್ನದ ಗಣಿಯ ನಿವಾಸಿಯಾದ ಗಿರಿಜಾ ಇಂಜನೀಯರಿಂಗ್ ವಿದ್ಯಾರ್ಥಿನಿ. ಬಿಸಿಲ ಬೇಗೆಯಲಿ ನೊಂದ ಮನಸಿನ ಭಾವನೆಗಳನು ಬರಹ ರೂಪದಲ್ಲಿ ಹಾಳೆಗೆ ಇಳಿಸುವ ಪ್ರಯತ್ನವನ್ನಿಲ್ಲಿ ಗಿರಿಜಾ ಮಾಡಿದ್ದಾರೆ. ಇಂದಿನ ವಿದ್ಯಾರ್ಥಿ ಸಮೂಹಕ್ಕೆ ಸಾಹಿತ್ಯದ ಜ್ಞಾನ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಇಂಜನೀಯರಿಂಗ್ ಓದುತ್ತಿದ್ದರೂ ಕೂಡ ಗಿರಿಜಾ ಅವರು ಬರೆಯುವ ಗೀಳಿಗೆ ಅಂಟಿಕೊಂಡಿದ್ದು ತುಂಬ ಸಂತಸ. ಕೊರೋನಾ ದಿಂದ ಮನುಕುಲಕ್ಕೆ ಆದ ಅರಿವನ್ನು ಅಕ್ಷರದ ರೂಪಕ್ಕಿಳಿಸುವ ಮೂಲಕ ಗಿರಿಜಾ ದಿವಾನ್ ಕರೋನಾ-ಹೈರಾಣ ಕವನವನ್ನು ಕಟ್ಟಿಕೊಟ್ಟಿದ್ದಾರೆ.

ಕರೋನ-ಹೈರಾಣ

ಕೊರೋನ ನೀ ಮಾಡುತ್ತಿರುವೆ ನಮ್ಮೆಲ್ಲರನ್ನು ಹೈರಾಣ

ಆದರೂ ನೀ ಮಾಡಿದೆ ಮಾಲಿನ್ಯ ತಡೆದು ಭೂ ತಾಯಿಗೊಂದು ಸನ್ಮಾನ

ಬಿತ್ತರಿಸುತ್ತಿರುವೆ ಸಂದೇಶವ ನಾನು

ಎಂದು ಮೆರೆಯದಿರು ಮನುಜ ನಿಸರ್ಗ ಮಾತೆಯನು

ತಾಯಿನಾಡು, ದೇಶ-ಭಾಷೆ ಮರೆತು

ರೆಕ್ಕೆ ಕಟ್ಟಿ ವಿದೇಶಕ್ಕೆ ಹಾರಿ ಹೋದ ಮನುಜನಿಗೆ ನೀ ತಿಳಿಸಿಕೊಟ್ಟೆ,

ನಿನ್ನ ತಾಯಿನಾಡೆ ನಿನಗೆ ಕೊನೆಗಾಸರೆ ಎಂದು

ಪಿಜ್ಜಾ –ಬರ್ಗರ್-ಕೆಎಫ್ಸಿ ಎಂದೂ ಆಗದು  

ನಿನ್ನ ತಾಯಿಯ ಕೈರುಚಿ ಗಿಂತಲೂ ಮುಂದು

ಆದರೂ ನಮ್ಮದೊಂದು ವಿನಂತಿ ನಿನ್ನಲ್ಲಿ

ವಿರಾಮ ಕೊಡು ನಿನ್ನ ಈ ಶಿಕ್ಷೆಯಲ್ಲಿ

ಬಲಿಯಾಗುತ್ತಿಹವು ಎಷ್ಟೋ ಮುಗ್ಧ ಜೀವಿಗಳು

ಹಸಿವೆಯಿಂದ ತಲ್ಲಣಿಸುತ್ತಿಹವು ಪ್ರಾಣಿಪಕ್ಷಿಗಳು

ಅರಿವಾಯಿತು ಮನುಕುಲಕೆ

ರೈತ ಬೆಳೆದ ಅಕ್ಕಿ, ಗೋಧಿ, ಧಾನ್ಯಗಳಿಗುಂಟು ಬೆಲೆ ಎಂದು

ನಾವು ಕೂಡಿಟ್ಟ ಕೋಟಿಗಲ್ಲವೆಂದು

ದುಡ್ಡೆ ದೊಡ್ಡಪ್ಪ ಎನ್ನುವ ದುರಾಸೆಯೊಂದು ದೂರವಾಯಿತು

ನಮ್ಮೂರೆ ನಮಗೆ ಸವಿಬೆಲ್ಲ ಎನ್ನುವುದು ಗೊತ್ತಾಯಿತು

ಗಿರಿಜಾ ದಿವಾನ್

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-8

ನಂರುಶಿ ಅವರು ಗಜಲ್ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕರಾದ ಕೃತಿಗಳು ಈಗಾಗಲೇ ಹೊರತಂದಿದ್ದು, ತಮ್ಮ ಗಜಲ್ ಮೂಲಕ ಕೊರೋನಾ ವೈರಸ್ ನಿಂದಲೇ ಮಾತನಾಡಿಸಿದ್ದಾರೆ.

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.

ಅವನೇ ಶ್ರೀಮನ್ನಾರಾಯಣನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ!

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಲಾಕ್ ಡೌನ್ ಹಿನ್ನೆಲೆಯಲ್ಲಿ…

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.