ಕೊಪ್ಪಳ: ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿನ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ಲಾಕ್ ಡೌನ್ ಹಿನ್ನೆಲೆ ಕಳೆದ 40 ದಿನಗಳಿಂದ ಸಾರಾಯಿ ಅಂಗಡಿ ಬಂದ್ ಮಾಡಲಾಗಿತ್ತು. ಆದರೆ ಇಂದು ರಾಜ್ಯದೆಲ್ಲೆಡೆ ಮತ್ತೆ ಸಾರಾಯಿ ಅಂಗಡಿ ಪ್ರಾರಂಭವಾಗಿದ್ದರಿಂದ ಇದಕ್ಕೆ ಗಂಗಾವತಿ ತಾಲೂಕಿನ ತಾಂಡಾ ನಿವಾಸಿಗಳು ನಿರೂಪಿಸಿದ್ದಾರೆ.

ಮದ್ಯದಂಗಡಿ ಪ್ರಾರಂಭ ವಿರೋಧಿಸಿ ಲಂಬಾಣಿ ಸಂಘಟನೆ ಯುವಕರ ಜಾಗೃತಿ

ಈ ಬಗ್ಗೆ ಗಂಗಾವತಿ ತಾಲೂಕು ಗೋರಸೇನಾ ಸಂಘಟನೆ ವತಿಯಿಂದ ವಿರೋಧ ವ್ಯಕ್ತ ಪಡಿಸಿ ಸಾರಾಯಿ ಮುಕ್ತ ತಾಂಡಾ ನಿರ್ಮಾಣಕ್ಕಾಗಿ ಜಾಗೃತಿ ಮೂಡಿಸುವ ಹಾಗೂ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿಕೊಂಡ ಕರಪತ್ರ ಹಂಚಲಾಯಿತು.

ನಮ್ಮ ರಾಜ್ಯದಲ್ಲಿ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಎಲ್ಲರೂ ಮದ್ಯೆ ತ್ಯಜಿಸಿದ್ದಾರೆ. ಇದರಿಂದಾಗಿ ಎಲ್ಲಾ ಮನೆಗಳಲ್ಲಿಯೂ ಸಂತೋಷ, ನೆಮ್ಮದಿ ಹೆಚ್ಚಾಗಿದೆ. ಖರ್ಚು ಕಡಿಮೆಯಾಗಿದೆ. ಮದ್ಯೆ ಸೇವನೆ ಬಿಟ್ಟಿದ್ದರಿಂದ ನಮಗೇನೂ ಕೆಡಕಾಗಿಲ್ಲ. ಹೀಗಿರುವಾಗ ಈಗ ಮತ್ತೊಮ್ಮೆ ಮದ್ಯೆ ಸೇವನೆ ಯಾಕೆ?

ಸಹೋದರಿಯರೇ, ಕುಟುಂಬ ಸಮೇತರಾಗಿ ಮನೆಯಲ್ಲಿ ಎಲ್ಲರೂ ದೇವರ ಹೆಸರಿನಲ್ಲಿ ಮದ್ಯೆ ತಿರಸ್ಕರಿಸುವ ಸಂಕಲ್ಪ ಮಾಡಿರಿ. ಮದ್ಯಪಾನ ಬೇಡ. ನಲ್ವತ್ತು ದಿನಗಳಲ್ಲಿ ಗಳಿಸಿದ ಆರೋಗ್ಯವನ್ನು ಜೀವನಪೂರ್ತಿ ಉಳಿಸಿಕೊಳ್ಳೋಣ. ಇದುವೇ ಮಹಾತ್ಮಾ ಗಾಂಧೀಜಿ ಕನಸು. ಇದುವೇ ನಮ್ಮೆಲ್ಲರ ಆಶಯ. ನಾವೆಲ್ಲರೂ ಒಂದು ಸಮೃದ್ಧ ಕುಟುಂಬದ ನಿರ್ಮಾಪಕರುಗಳು. ಎಂಬ ಸಂದೇಶ ಸಾರುವ ಕರಪತ್ರ ಹಂಚುವ ಮೂಲಕ ತಾಲೂಕಿನಾದ್ಯಂತ ಜಾಗೃತಿಗೆ ಮುಂದಾಗಿದ್ದಾರೆ.

1 comment
  1. Gorsikvadi Gorsena padadikarigalu lambani samajad prathisteanna savaskarvanna yatti Hidadiddary

Leave a Reply

Your email address will not be published. Required fields are marked *

You May Also Like

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.