ಕೊಪ್ಪಳ: ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿನ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ಲಾಕ್ ಡೌನ್ ಹಿನ್ನೆಲೆ ಕಳೆದ 40 ದಿನಗಳಿಂದ ಸಾರಾಯಿ ಅಂಗಡಿ ಬಂದ್ ಮಾಡಲಾಗಿತ್ತು. ಆದರೆ ಇಂದು ರಾಜ್ಯದೆಲ್ಲೆಡೆ ಮತ್ತೆ ಸಾರಾಯಿ ಅಂಗಡಿ ಪ್ರಾರಂಭವಾಗಿದ್ದರಿಂದ ಇದಕ್ಕೆ ಗಂಗಾವತಿ ತಾಲೂಕಿನ ತಾಂಡಾ ನಿವಾಸಿಗಳು ನಿರೂಪಿಸಿದ್ದಾರೆ.

ಮದ್ಯದಂಗಡಿ ಪ್ರಾರಂಭ ವಿರೋಧಿಸಿ ಲಂಬಾಣಿ ಸಂಘಟನೆ ಯುವಕರ ಜಾಗೃತಿ

ಈ ಬಗ್ಗೆ ಗಂಗಾವತಿ ತಾಲೂಕು ಗೋರಸೇನಾ ಸಂಘಟನೆ ವತಿಯಿಂದ ವಿರೋಧ ವ್ಯಕ್ತ ಪಡಿಸಿ ಸಾರಾಯಿ ಮುಕ್ತ ತಾಂಡಾ ನಿರ್ಮಾಣಕ್ಕಾಗಿ ಜಾಗೃತಿ ಮೂಡಿಸುವ ಹಾಗೂ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿಕೊಂಡ ಕರಪತ್ರ ಹಂಚಲಾಯಿತು.

ನಮ್ಮ ರಾಜ್ಯದಲ್ಲಿ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಎಲ್ಲರೂ ಮದ್ಯೆ ತ್ಯಜಿಸಿದ್ದಾರೆ. ಇದರಿಂದಾಗಿ ಎಲ್ಲಾ ಮನೆಗಳಲ್ಲಿಯೂ ಸಂತೋಷ, ನೆಮ್ಮದಿ ಹೆಚ್ಚಾಗಿದೆ. ಖರ್ಚು ಕಡಿಮೆಯಾಗಿದೆ. ಮದ್ಯೆ ಸೇವನೆ ಬಿಟ್ಟಿದ್ದರಿಂದ ನಮಗೇನೂ ಕೆಡಕಾಗಿಲ್ಲ. ಹೀಗಿರುವಾಗ ಈಗ ಮತ್ತೊಮ್ಮೆ ಮದ್ಯೆ ಸೇವನೆ ಯಾಕೆ?

ಸಹೋದರಿಯರೇ, ಕುಟುಂಬ ಸಮೇತರಾಗಿ ಮನೆಯಲ್ಲಿ ಎಲ್ಲರೂ ದೇವರ ಹೆಸರಿನಲ್ಲಿ ಮದ್ಯೆ ತಿರಸ್ಕರಿಸುವ ಸಂಕಲ್ಪ ಮಾಡಿರಿ. ಮದ್ಯಪಾನ ಬೇಡ. ನಲ್ವತ್ತು ದಿನಗಳಲ್ಲಿ ಗಳಿಸಿದ ಆರೋಗ್ಯವನ್ನು ಜೀವನಪೂರ್ತಿ ಉಳಿಸಿಕೊಳ್ಳೋಣ. ಇದುವೇ ಮಹಾತ್ಮಾ ಗಾಂಧೀಜಿ ಕನಸು. ಇದುವೇ ನಮ್ಮೆಲ್ಲರ ಆಶಯ. ನಾವೆಲ್ಲರೂ ಒಂದು ಸಮೃದ್ಧ ಕುಟುಂಬದ ನಿರ್ಮಾಪಕರುಗಳು. ಎಂಬ ಸಂದೇಶ ಸಾರುವ ಕರಪತ್ರ ಹಂಚುವ ಮೂಲಕ ತಾಲೂಕಿನಾದ್ಯಂತ ಜಾಗೃತಿಗೆ ಮುಂದಾಗಿದ್ದಾರೆ.

1 comment
  1. Gorsikvadi Gorsena padadikarigalu lambani samajad prathisteanna savaskarvanna yatti Hidadiddary

Leave a Reply

Your email address will not be published. Required fields are marked *

You May Also Like

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ಸ್ಟೋನ್ ಕ್ರಷರ್ ನಿಂದಾಗುತ್ತಿರುವ ತೊಂದರೆ ತಪ್ಪಿಸಿ: ಲಕ್ಷ್ಮೇಶ್ವರದಲ್ಲಿ ರೈತರ ಮನವಿ

ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ…