ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ  ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ?

ಹೌದು ಇದು ಕೌನ್ ಬನೇಗಾ ಕರೋಡ ಪತಿ ಎನ್ನುವ ಕಿರುತೆರೆಯ ರಿಯಾಲಿಟಿ ಶೋ ಮತ್ತೆ ಆರಂಭವಾಗುವ ಸೂಚನೆ. ಅಮಿತಾಭ್​ ಬಚ್ಚನ್​ ನಡೆಸಿಕೊಡುವ ಕೌನ್​ ಬನೇಗ ಕರೋಡ್​ ಪತಿ ಕಿರುತೆರೆಯ ಕಾರ್ಯಕ್ರಮ 12ನೇ ಕಂತಿಗೆ ಸ್ಪರ್ಧಿಗಳ ಆಯ್ಕೆಯ ಪ್ರಕ್ರಿಯೆ ಕೂಡ ಆರಂಭಗೊಂಡಿದೆ. ಕೌನ್ ಬನೇಗಾ ಕರೋಡಪತಿ ರಿಯಾಲಿಟಿ ಶೋ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಚಿತ್ರೀಕರಣ ಡಿಜಿಟಲೀಕರಣ ಮೂಲಕ ನಡೆಯಲಿದೆ. ಮೊದಲ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದವರನ್ನು ಎರಡನೇ ಹಂತದಲ್ಲಿ ಟೆಲಿಫೋನ್ ಮೂಲಕ ಆಯ್ಕೆ ಪ್ರಕ್ರಿಯೆಗೆ ಒಳಪಡಿಸಲಾಗುತ್ತದೆ. ಮೂರನೇ ಹಂತದ ಪ್ರಕ್ರಿಯೆ ಆನ್ ಲೈನ್ ಆಡಿಷನ್ ಮೂಲಕ ನಡೆಯಲಿದೆ. ಅಂತಿಮ ಸುತ್ತು ವೈಯಕ್ತಿಕ ಸಂದರ್ಶನವಾಗಿರಲಿದೆ, ಅದನ್ನು ವಿಡಿಯೊ ಕಾಲ್ ಮೂಲಕ ನಡೆಸಲಾಗುತ್ತದೆ.ಇಡೀ ಆಯ್ಕೆ ಪ್ರಕ್ರಿಯೆಯನ್ನು ಸ್ವತಂತ್ರ ಆಡಿಟ್ ಕೇಂದ್ರ ತಪಾಸಣೆ ಮಾಡಲಿದೆ.

ಸೋನಿ ಎಂಟರ್ಟೈನ್ ಮೆಂಟ್ ಟೆಲಿವಿಷನ್ ನಲ್ಲಿ ಮೇ 9ರಿಂದ ಮೇ 22ರವರೆಗೆ  ಸ್ಪರ್ಧಿಗಳ ದಾಖಲಾತಿ ನಡೆಯಲಿದೆ. ಪ್ರತಿದಿನ ರಾತ್ರಿ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ಪ್ರಶ್ನೆಗಳನ್ನು ಕೇಳಲಿದ್ದು ವೀಕ್ಷಕರು ಎಸ್ ಎಂಎಸ್ ಅಥವಾ ಸೋನಿ ಲೈವ್ ಮೂಲಕ ಉತ್ತರಿಸಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.