ಗದಗ: ಕೋವಿಡ್ -19 ಹರಡದಂತೆ  ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ   ರಾತ್ರಿ  7 ಗಂಟೆಯಿಂದ ಮುಂಜಾನೆ  7 ಗಂಟೆಯವರೆಗೆ   ಅನಿವಾರ್ಯ ಕಾರಣ   ಹೊರತುಪಡಿಸಿ ಎಲ್ಲ ವ್ಯಕ್ತಿಗಳ ಸಂಚಾರ ನಿಷೇಧಿಸಿದೆ. ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣ ಹೊರತುಪಡಿಸಿ  65 ವರ್ಷದ  ಮೇಲ್ಪಟ್ಟವರು , 10 ವರ್ಷದೊಳಗಿನ ಮಕ್ಕಳು,  ರೋಗಗ್ರಸ್ಥ ವ್ಯಕ್ತಿಗಳನ್ನು ಹಾಗೂ ಗರ್ಭಿಣಿಯರನ್ನು  ಕಡ್ಡಾಯವಾಗಿ ಅವರು  ಮನೆಯಲ್ಲಿಯೇ ಇರತಕ್ಕದ್ದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.  ಆದೇಶ ಉಲ್ಲಂಘಿಸಿದವರ ವಿರುದ್ಧ  ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯದೆ 2005, ಭಾರತೀಯ  ದಂಡ   ಕ್ರಮ ಜರುಗಿಸಲಾಗುವುದು.
        ಜಿಲ್ಲೆಯಾದ್ಯಂತ ಮುಂದುವರೆದ ಪ್ರತಿಬಂಧಕಾಜ್ಞೆ ಪರಿಣಾಮಕಾರಿ ಜಾರಿ  ಕುರಿತು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲ ತಹಶೀಲ್ದಾರರು ಹಾಗೂ ಸಂಬಂಧಿತ ಇಲಾಖಾ ಅಧಿಕಾರಿಗಳು ಕ್ರಮ  ಜರುಗಿಸುವಂತೆ  ಜಿಲ್ಲಾಧಿಕಾರಿಗಳ  ಆದೇಶದಲ್ಲಿ ತಿಳಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…

ಸಿದ್ಧರಾಮಯ್ಯ ಗೆ ಅಹಿಂದ ಮತದಾರರ ಬೆಂಬಲ

ಉತ್ತರಪ್ರಭ ಸುದ್ದಿ ಬಸವನಬಾಗೇವಾಡಿ: ಶಿವಾನಂದ ಪಾಟೀಲ ಎರಡೂ ಬಾರಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಎರಡೂ ಬಾರಿ…

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.