ಗದಗ: ಕೋವಿಡ್ -19 ಹರಡದಂತೆ  ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ   ರಾತ್ರಿ  7 ಗಂಟೆಯಿಂದ ಮುಂಜಾನೆ  7 ಗಂಟೆಯವರೆಗೆ   ಅನಿವಾರ್ಯ ಕಾರಣ   ಹೊರತುಪಡಿಸಿ ಎಲ್ಲ ವ್ಯಕ್ತಿಗಳ ಸಂಚಾರ ನಿಷೇಧಿಸಿದೆ. ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣ ಹೊರತುಪಡಿಸಿ  65 ವರ್ಷದ  ಮೇಲ್ಪಟ್ಟವರು , 10 ವರ್ಷದೊಳಗಿನ ಮಕ್ಕಳು,  ರೋಗಗ್ರಸ್ಥ ವ್ಯಕ್ತಿಗಳನ್ನು ಹಾಗೂ ಗರ್ಭಿಣಿಯರನ್ನು  ಕಡ್ಡಾಯವಾಗಿ ಅವರು  ಮನೆಯಲ್ಲಿಯೇ ಇರತಕ್ಕದ್ದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.  ಆದೇಶ ಉಲ್ಲಂಘಿಸಿದವರ ವಿರುದ್ಧ  ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯದೆ 2005, ಭಾರತೀಯ  ದಂಡ   ಕ್ರಮ ಜರುಗಿಸಲಾಗುವುದು.
        ಜಿಲ್ಲೆಯಾದ್ಯಂತ ಮುಂದುವರೆದ ಪ್ರತಿಬಂಧಕಾಜ್ಞೆ ಪರಿಣಾಮಕಾರಿ ಜಾರಿ  ಕುರಿತು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲ ತಹಶೀಲ್ದಾರರು ಹಾಗೂ ಸಂಬಂಧಿತ ಇಲಾಖಾ ಅಧಿಕಾರಿಗಳು ಕ್ರಮ  ಜರುಗಿಸುವಂತೆ  ಜಿಲ್ಲಾಧಿಕಾರಿಗಳ  ಆದೇಶದಲ್ಲಿ ತಿಳಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಅಮೆರಿಕದಲ್ಲಿ ವೇದ ಮಂತ್ರ ಪಠಣ!

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ನೇಪಾಳದೊಂದಿಗೆ ನಮ್ಮದು ಗಟ್ಟಿ ಸಂಬಂಧ: ಹೈರಾಣಾಗಿರುವ ಭಾರತಕ್ಕೆ ಇದು ಇನ್ನಷ್ಟು ಮುಜುಗರ

ದೆಹಲಿ: ನೇಪಾಳದೊಂದಿಗೆ ನಮ್ಮ ಸಂಬಂಧ ಬಲಿಷ್ಠವಾಗಿದೆ ಎಂದು ಭಾರತೀಯ ಸೇನಾ ಮುಖಸ್ಥ ಎಂ.ಎಂ.ನರವಣೆ ಹೇಳಿದ್ದಾರೆ. ನಾವು…

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.