ಗದಗ: ಕೋವಿಡ್ -19 ಹರಡದಂತೆ  ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ   ರಾತ್ರಿ  7 ಗಂಟೆಯಿಂದ ಮುಂಜಾನೆ  7 ಗಂಟೆಯವರೆಗೆ   ಅನಿವಾರ್ಯ ಕಾರಣ   ಹೊರತುಪಡಿಸಿ ಎಲ್ಲ ವ್ಯಕ್ತಿಗಳ ಸಂಚಾರ ನಿಷೇಧಿಸಿದೆ. ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣ ಹೊರತುಪಡಿಸಿ  65 ವರ್ಷದ  ಮೇಲ್ಪಟ್ಟವರು , 10 ವರ್ಷದೊಳಗಿನ ಮಕ್ಕಳು,  ರೋಗಗ್ರಸ್ಥ ವ್ಯಕ್ತಿಗಳನ್ನು ಹಾಗೂ ಗರ್ಭಿಣಿಯರನ್ನು  ಕಡ್ಡಾಯವಾಗಿ ಅವರು  ಮನೆಯಲ್ಲಿಯೇ ಇರತಕ್ಕದ್ದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.  ಆದೇಶ ಉಲ್ಲಂಘಿಸಿದವರ ವಿರುದ್ಧ  ಸಾಂಕ್ರಾಮಿಕ ರೋಗಗಳ ಕಾಯಿದೆ 1897, ವಿಪತ್ತು ನಿರ್ವಹಣಾ ಕಾಯದೆ 2005, ಭಾರತೀಯ  ದಂಡ   ಕ್ರಮ ಜರುಗಿಸಲಾಗುವುದು.
        ಜಿಲ್ಲೆಯಾದ್ಯಂತ ಮುಂದುವರೆದ ಪ್ರತಿಬಂಧಕಾಜ್ಞೆ ಪರಿಣಾಮಕಾರಿ ಜಾರಿ  ಕುರಿತು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲ ತಹಶೀಲ್ದಾರರು ಹಾಗೂ ಸಂಬಂಧಿತ ಇಲಾಖಾ ಅಧಿಕಾರಿಗಳು ಕ್ರಮ  ಜರುಗಿಸುವಂತೆ  ಜಿಲ್ಲಾಧಿಕಾರಿಗಳ  ಆದೇಶದಲ್ಲಿ ತಿಳಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…

ಕೊರೊನಾ ಕರ್ಪ್ಯೂಗೆ ಶಿರಹಟ್ಟಿ ಸಂಪೂರ್ಣ ಸ್ತಬ್ಧ..!

ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ವೀಕೆಂಡ್ ಕಫ್ಯೂ೯ಗೆ ಶನಿವಾರ ಪಟ್ಟಣ ಸಂಪೂರ್ಣ ಸ್ಥಬ್ಧವಾದ ಚಿತ್ರಣ ಕಂಡು ಬಂದಿತು.

ದಿಗ್ವಿಜಯ್ ಸಿಂಗ್ ನಕಲಿ ಟ್ವೀಟರ್ ರಚನೆ: ದೂರು ನೀಡಿದ ಕೈ ನಾಯಕ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್…