ಗದಗ: ಕೊವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ದೇಶಾದ್ಯಂತ ವಿಧಿಸಲಾದ ಲಾಕಡೌನ ಸಂದರ್ಭದಲ್ಲಿ ಹೊರ ರಾಜ್ಯಗಳಲ್ಲಿ ಸಿಲುಕಿರುವ  ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ  ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬರೇ ಆಗಿದ್ದಲ್ಲಿ ಆಧಾರ, ಚುನಾವಣಾ, ವಾಹನ ಚಾಲನೆ ಅಥವಾ ಪಾಸಪೋರ್ಟ್ ಗುರುತಿನ ಚೀಟಿ ಮತ್ತು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಲ್ಲಿ ಕುಟುಂಬದ ಭಾವಚಿತ್ರ ಕಡ್ಡಾಯವಾಗಿ ಸಲ್ಲಿಸಬೇಕು.

ಸೇವಾಸಿಂಧು ಕೇಂದ್ರಗಳು: ಕರ್ನಾಟಕ ಒನ್ ಕೇಂದ್ರ, ಎಲ್ಲ ತಹಶೀಲ್ದಾರರ ಕಾರ್ಯಲಯಗಳು, ನಾಡಕಚೇರಿಗಳು, ನಗರಸಭೆ, ಪುರಸಭೆ, ನಾಗರೀಕ ಸೇವಾ ಕೇಂದ್ರಗಳು, ಗ್ರಾಮ ಪಂಚಾಯತಗಳಲ್ಲಿನ ಬಾಪೂಜಿ ಸೇವಾ ಕೇಂದ್ರಗಳಲ್ಲಿ  ಪ್ರಯಾನದ ಅನುಮತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಸಾರ್ವಜನಿಕರು ಮತ್ತು ಆಯಾ ಕಚೇರಿಗಳವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವದನ್ನು ಕಡ್ಡಾಯವಾಗಿ ಅನುಸರಿಸುವ ನಿಯಮ ಕಡ್ಡಾಯವಾಗಿಸಿದೆ.

Leave a Reply

Your email address will not be published. Required fields are marked *

You May Also Like

ರಜೆ ರದ್ದುಗೊಳಿಸಿ ಜೂ.19ರವರೆಗೆ ಸುಪ್ರೀಂ ಕೋರ್ಟ್ ಕಾರ್ಯ

ಇದೀಗ ಸುಪ್ರೀಂ ಕೋರ್ಟ್‌ ಕೂಡ ತಮ್ಮ ರಜೆಯನ್ನು ರದ್ದುಗೊಳಿಸಿ ಜೂನ್‌ 19ರ ವರೆಗೆ ಕಾರ್ಯನಿರ್ವಹಿಸಲಿದೆ.

ಪ್ರಧಾನಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುವು ಕರುಣೆ ಇಲ್ಲ: ಜಿ.ಎಸ್.ಪಾಟೀಲ್ ಆರೋಪ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದಲ್ಲಿ 3 ತಿಂಗಳಿಂದ ಹೋರಾಟ ನಡೆಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರೂ ಸರ್ಕಾರ ಹಿಂಪಡೆಯುವ ಚಿಂತನೆ ನಡೆಸುತ್ತಿಲ್ಲ. ಆದ್ದರಿಂದ ಫೆ.20 ರಂದು ಜಿಲ್ಲೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ‍್ಯಾಲಿ ಹಾಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಬದುಕು ಮುಗಿಸಿದ ಬಂಗಾರದ ಅವ್ವ :ಡಾ. ಗೀತಾ ನಾಗಭೂಷಣ

ಸನ್ 2010ರಲ್ಲಿ ಗದಗ ನಲ್ಲಿ ಜರುಗಿದ ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ…