ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಬಾಗಲಕೋಟೆ : ಬಾದಾಮಿ ಮೂಲದ ಕೊರೊನಾ ಸೋಂಕಿತ 23 ವರ್ಷದ ಗರ್ಭಿಣಿಯಿಂದ ನೂರಾರು ಜನರಲ್ಲಿ ಆತಂಕ ಮನೆ ಮಾಡಿದೆ.

ಗರ್ಭಿಣಿಯೊಬ್ಬರಲ್ಲಿ ಭಾನುವಾರ ಸೋಂಕು ಇರುವುದು ಖಚಿತವಾಗಿತ್ತು. 5 ತಿಂಗಳ ಗರ್ಭಿಣಿಯಾಗಿರುವ ಮಹಿಳೆ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿಂದೆ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಅಲ್ಲಿಂದ ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿರುವ ತನ್ನ ಪೋಷಕರ ಮನೆಗೂ ತೆರಳಿದ್ದರು. ಎರಡು ವಾರಗಳ ಬಳಿಕ ಮತ್ತೆ ಬಾಗಲಕೋಟೆಯ ಅತ್ತೆ ಮನೆಗೆ ತೆರಳಿದ್ದರು.

ಆನಂತರ ಉಸಿರಾಟದ ತೊಂದರೆಯಿಂದಾಗಿ 3 ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು, ಅದು ಇರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ನಾಲ್ವರು ವೈದ್ಯರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಅಲ್ಲದೇ, ಮಹಿಳೆಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ಮಕ್ಕಳಿಗೆ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಆಯುರ್ವೇದ ಔಷಧ ಬಳಸಿ

ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ…

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.