ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಬಾಗಲಕೋಟೆ : ಬಾದಾಮಿ ಮೂಲದ ಕೊರೊನಾ ಸೋಂಕಿತ 23 ವರ್ಷದ ಗರ್ಭಿಣಿಯಿಂದ ನೂರಾರು ಜನರಲ್ಲಿ ಆತಂಕ ಮನೆ ಮಾಡಿದೆ.

ಗರ್ಭಿಣಿಯೊಬ್ಬರಲ್ಲಿ ಭಾನುವಾರ ಸೋಂಕು ಇರುವುದು ಖಚಿತವಾಗಿತ್ತು. 5 ತಿಂಗಳ ಗರ್ಭಿಣಿಯಾಗಿರುವ ಮಹಿಳೆ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿಂದೆ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಅಲ್ಲಿಂದ ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿರುವ ತನ್ನ ಪೋಷಕರ ಮನೆಗೂ ತೆರಳಿದ್ದರು. ಎರಡು ವಾರಗಳ ಬಳಿಕ ಮತ್ತೆ ಬಾಗಲಕೋಟೆಯ ಅತ್ತೆ ಮನೆಗೆ ತೆರಳಿದ್ದರು.

ಆನಂತರ ಉಸಿರಾಟದ ತೊಂದರೆಯಿಂದಾಗಿ 3 ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು, ಅದು ಇರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ನಾಲ್ವರು ವೈದ್ಯರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಅಲ್ಲದೇ, ಮಹಿಳೆಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೋಕಿಯಾ ತಯಾರಿಕಾ ಘಟಕದ ಸಿಬ್ಬಂದಿಗೆ ಕೊರೊನಾ ಕಾಟ – ಕಂಪನಿ ಬಂದ್!

ಚೆನ್ನೈ: ತಮಿಳುನಾಡಿನಲ್ಲಿನ ನೋಕಿಯಾ ಫೋನ್ ತಯಾರಿಕಾ ಘಟಕದ 49 ಜನ ಸಿಬ್ಬಂದಿಗೆ ಕೊರೊನಾ ಅಂಟಿಕೊಂಡಿದೆ. ಹೀಗಾಗಿ…

ವಿಧಾನ ಸಭೆಯಲ್ಲಿ ಚರ್ಚಿಸಬೇಕಿದ್ದ ನೈತಿಕತೆ, ಚರ್ಚೆ ಆಗಲೇ ಇಲ್ಲ

ಮಾನವ ತನ್ನ ಜೀವನದಲ್ಲಿ ಕೆಲವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಮೌಲ್ಯ ಇಲ್ಲದ ಜೀವನ, ಜೀವನವೇ ಅಲ್ಲ. ನಂಬಿಕೆ. ವಿಶ್ವಾಸ,ತತ್ವ,ಸಿದ್ಧಾಂತ’ ನೈತಿಕತೆ, ಇವು ಮಾನವೀಯ ಮೌಲ್ಯಗಳು. ಇವುಗಳಲ್ಲಿ ಶ್ರೇಷ್ಠವಾದದ್ದು ನೈತಿಕತೆ.

ಯುದ್ಧಕ್ಕೆ ಸಿದ್ಧವಾಗಿರುವಂತೆ ಸೂಚಿಸಿದ ರಕ್ಷಣಾ ಸಚಿವ!

ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ…