ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಬಾಗಲಕೋಟೆ : ಬಾದಾಮಿ ಮೂಲದ ಕೊರೊನಾ ಸೋಂಕಿತ 23 ವರ್ಷದ ಗರ್ಭಿಣಿಯಿಂದ ನೂರಾರು ಜನರಲ್ಲಿ ಆತಂಕ ಮನೆ ಮಾಡಿದೆ.

ಗರ್ಭಿಣಿಯೊಬ್ಬರಲ್ಲಿ ಭಾನುವಾರ ಸೋಂಕು ಇರುವುದು ಖಚಿತವಾಗಿತ್ತು. 5 ತಿಂಗಳ ಗರ್ಭಿಣಿಯಾಗಿರುವ ಮಹಿಳೆ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿಂದೆ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಅಲ್ಲಿಂದ ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿರುವ ತನ್ನ ಪೋಷಕರ ಮನೆಗೂ ತೆರಳಿದ್ದರು. ಎರಡು ವಾರಗಳ ಬಳಿಕ ಮತ್ತೆ ಬಾಗಲಕೋಟೆಯ ಅತ್ತೆ ಮನೆಗೆ ತೆರಳಿದ್ದರು.

ಆನಂತರ ಉಸಿರಾಟದ ತೊಂದರೆಯಿಂದಾಗಿ 3 ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು, ಅದು ಇರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ನಾಲ್ವರು ವೈದ್ಯರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಅಲ್ಲದೇ, ಮಹಿಳೆಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ಸಂಡೇ ಲಾಕ್ ಡೌನ್ ಸಂಕಟ: ಕಂಗಾಲಾದ ಕಾಗೆಗಳಿಗೆ ಖಾರಾ-ಡಾಣಿ ಊಟ

ಸಂಡೇ ಲಾಕ್ ಡೌನ್ ಸಂದರ್ಭದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಹೊಟೆಲ್ ಮಾಲೀಕರೊಬ್ಬರು ಖಾರಾ-ಡಾಣಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…

ಸೀಡಿ ಪ್ರಕರಣ : ಸಂತ್ರಸ್ತೆಗೆ ಗ್ರಾಮಸ್ಥರ ಬೆಂಬಲ

ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.