ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಬಾಗಲಕೋಟೆ : ಬಾದಾಮಿ ಮೂಲದ ಕೊರೊನಾ ಸೋಂಕಿತ 23 ವರ್ಷದ ಗರ್ಭಿಣಿಯಿಂದ ನೂರಾರು ಜನರಲ್ಲಿ ಆತಂಕ ಮನೆ ಮಾಡಿದೆ.

ಗರ್ಭಿಣಿಯೊಬ್ಬರಲ್ಲಿ ಭಾನುವಾರ ಸೋಂಕು ಇರುವುದು ಖಚಿತವಾಗಿತ್ತು. 5 ತಿಂಗಳ ಗರ್ಭಿಣಿಯಾಗಿರುವ ಮಹಿಳೆ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿಂದೆ ಸೋಂಕಿತ ಮಹಿಳೆ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಬಳಿಕ ಅಲ್ಲಿಂದ ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮದಲ್ಲಿರುವ ತನ್ನ ಪೋಷಕರ ಮನೆಗೂ ತೆರಳಿದ್ದರು. ಎರಡು ವಾರಗಳ ಬಳಿಕ ಮತ್ತೆ ಬಾಗಲಕೋಟೆಯ ಅತ್ತೆ ಮನೆಗೆ ತೆರಳಿದ್ದರು.

ಆನಂತರ ಉಸಿರಾಟದ ತೊಂದರೆಯಿಂದಾಗಿ 3 ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು, ಅದು ಇರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ನಾಲ್ವರು ವೈದ್ಯರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಅಲ್ಲದೇ, ಮಹಿಳೆಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಗೆದ್ದ 103ರ ವೃದ್ಧೆ

ಅಮೆರಿಕದ ಮೆಸಾಚ್ಯುಸೆಟ್ಸ್ ನಲ್ಲಿ 103ರ ವೃದ್ಧೆ ಸ್ಟೆಂಜಾ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿದ್ದಾರೆ.

ಕರೊನಾ ಅಲೆಯ ಮಧ್ಯೆ ರಾಜಕೀಯ ಅಲೆಯ ಅಬ್ಬರ

ದೊಡ್ಡವರಿಂದ ಹಿಡಿದು ಚಿಕ್ಕ ಮಕ್ಕಳ ವರೆಗೂ ಎಚ್ಚರಿಕೆ ಗಂಟೆಯನ್ನು ಬಾರಿಸಿರುವ ಕರೊನಾ ಎರಡನೆಯ ಅಲೆಯು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿದೆಯಾದರೂ ಫಂಗಸ್‌ನ (ಶಿಲೀಂಧ್ರ) ಕಾಟ ಮಾತ್ರ ಮುಂದುವರಿಯುತ್ತಲೇ ಇದೆ. ಸದ್ಯ ಲಭ್ಯವಿರುವ ಲಿಪೊಸೊಮಲ್ ಆಂಪೊಟೆರಿಸಿನ್ ಬಿ ಔಷಧವನ್ನು ಕಪ್ಪು ಶಿಲೀಂಧ್ರ ಸೋಂಕಿಗೆ ಒಳಗಾದವರಿಗೆ ನೀಡಲಾಗುತ್ತಿದೆ.

ಶೈಕ್ಷಣಿಕ ರಂಗಕ್ಕೆ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳ ಕೊಡುಗೆ ಅಮೋಘ – ಎಸ್.ಎಸ್.ಪಟ್ಟಣಶೆಟ್ಚರ

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಧಾಮಿ೯ಕತೆಯ ವೈಚಾರಿಕ ನೆಲೆಯಿಂದ ಎಲ್ಲರನ್ನೂ ಪ್ರೀತಿಯಿಂದ ಕಂಡಿರುವ ಲಿಂಗೈಕ್ಯ…

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…