ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು ಸಡಿಲಿಸಲಾಗಿದೆ. ನಿನ್ನೆಯಿಂದಲೇ ಸಡಿಲಿಕೆಯಾಗಿದ್ದು, ಜನರು ಮಾತ್ರ ಭಯವಿಲ್ಲದೆ ಓಡಾಡುತ್ತಿದ್ದಾರೆ. ಹೀಗಾದರೆ ಮುಂದಿನ ದಿನಗಳು ಸಾಕಷ್ಟು ಕಠಿಣವಾಗಿರಲಿದ್ದು, ಜನರು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಅರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಮಾತನಾಡಿ, ಮುಂದಿನ ದಿನಗಳು ನಮಗೆ ಪರೀಕ್ಷೆಯ ದಿನಗಳಾಗಿರಲಿದ್ದು, ಈ ದಿನಗಳಲ್ಲಿ ದಾಖಲಾಗುವ ಸೋಂಕಿತರ ಸಂಖ್ಯೆ ಹೋರಾಟದ ಫಲಿತಾಂಶ ನಿರ್ಧರಿಸಲಿವೆ. ಈಗಾಗಲೇ ಇಲಾಖೆ ಸಾಧ್ಯವಾದಷ್ಟು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದಿದ್ದಾರೆ.

ಅಧಿಕಾರಿಗಳು ಸಮುದಾಯ ಹರಡುವಿಕೆಯನ್ನು ತಡೆಯಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಸಾರ್ವಜನಿಕರು ಸ್ವಚ್ಛತೆ ಹಾಗೂ ಸ್ವಶಿಸ್ತು ಕಾಪಾಡಿಕೊಂಡು ಆರೋಗ್ಯದ ನಿಯಮ ಪಾಲಿಸಬೇಕು. ಇಲ್ಲವಾದರೆ, ಅಪಾಯ ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.

ಜನರು ಸರ್ಕಾರದ ಆದೇಶಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ, ಮಾಸ್ಕ್’ಗಳು ಧರಿಸುವುದರಿಂದ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಹಾಗೂ ಸ್ಯಾನಿಟೈಸರ್ ಗಳನ್ನು ಬಳಕೆ ಮಾಡುವುದರಿಂದ ಕೊರೊನಾ ಅಟ್ಟಬಹುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಪೊಲೀಸರ ಬೆನ್ನು ಬಿದ್ದ ಕೊರೊನಾ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆಯುತ್ತಿದೆ. ಪೊಲೀಸರೂ ಇದಕ್ಕೆ ಹೊರತಲ್ಲ.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ

ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…