ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು ಸಡಿಲಿಸಲಾಗಿದೆ. ನಿನ್ನೆಯಿಂದಲೇ ಸಡಿಲಿಕೆಯಾಗಿದ್ದು, ಜನರು ಮಾತ್ರ ಭಯವಿಲ್ಲದೆ ಓಡಾಡುತ್ತಿದ್ದಾರೆ. ಹೀಗಾದರೆ ಮುಂದಿನ ದಿನಗಳು ಸಾಕಷ್ಟು ಕಠಿಣವಾಗಿರಲಿದ್ದು, ಜನರು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಅರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಮಾತನಾಡಿ, ಮುಂದಿನ ದಿನಗಳು ನಮಗೆ ಪರೀಕ್ಷೆಯ ದಿನಗಳಾಗಿರಲಿದ್ದು, ಈ ದಿನಗಳಲ್ಲಿ ದಾಖಲಾಗುವ ಸೋಂಕಿತರ ಸಂಖ್ಯೆ ಹೋರಾಟದ ಫಲಿತಾಂಶ ನಿರ್ಧರಿಸಲಿವೆ. ಈಗಾಗಲೇ ಇಲಾಖೆ ಸಾಧ್ಯವಾದಷ್ಟು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದಿದ್ದಾರೆ.

ಅಧಿಕಾರಿಗಳು ಸಮುದಾಯ ಹರಡುವಿಕೆಯನ್ನು ತಡೆಯಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಸಾರ್ವಜನಿಕರು ಸ್ವಚ್ಛತೆ ಹಾಗೂ ಸ್ವಶಿಸ್ತು ಕಾಪಾಡಿಕೊಂಡು ಆರೋಗ್ಯದ ನಿಯಮ ಪಾಲಿಸಬೇಕು. ಇಲ್ಲವಾದರೆ, ಅಪಾಯ ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.

ಜನರು ಸರ್ಕಾರದ ಆದೇಶಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ, ಮಾಸ್ಕ್’ಗಳು ಧರಿಸುವುದರಿಂದ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಹಾಗೂ ಸ್ಯಾನಿಟೈಸರ್ ಗಳನ್ನು ಬಳಕೆ ಮಾಡುವುದರಿಂದ ಕೊರೊನಾ ಅಟ್ಟಬಹುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂದಪ್ಪ ಸಂಕನೂರ ಹುಟ್ಟು ಹಬ್ಬ ಪ್ರಯುಕ್ತ ರಕ್ತದಾನ: ರಕ್ತದಾನದಿಂದ ಜೀವ ಉಳಿಸಿದ ಪುಣ್ಯಪ್ರಾಪ್ತಿ

ದಾನಗಳಲ್ಲಿಯೇ ಶ್ರೇಷ್ಠತೆಯನ್ನು ಪಡೆದ ರಕ್ತದಾನದಿಂದ ಮತ್ತೊಂದು ಜೀವ ಉಳಿಸಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ರಕ್ತದಾನ ಮಾಡುವ ಮೂಲಕ ಅಂದಪ್ಪ ಸಂಕನೂರ ಅವರ ಜನ್ಮದಿನ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಎಸ್.ಪಿ.ಬಿ. ಜನ್ಮದಿನ: ಟ್ವೀಟರ್ ನಲ್ಲಿ ಶುಭಾಶಯಗಳ ಸುರಿಮಳೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ಹಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ.

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.