ಮದ್ಯದಿಂದ ವಂಚಿತರಾದರು ದಾವಣಗೆರೆ ಜನ
ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು ತೆರೆದಿವೆ. ಆದರೆ, ದಾವಣಗೆರೆ ಜಿಲ್ಲೆಯ ಜನರಿಗೆ ಮಾತ್ರ ಮದ್ಯ ಇಲ್ಲದಂತಾಗಿದೆ.
ಈ ಜಿಲ್ಲೆಯಲ್ಲಿ ಪ್ರಾರಂಭದಲ್ಲಿ 3 ಕೊರೊನಾ ಪ್ರಕರಣಗಳು ದಾಖಲಾಗಿ ಅವರು ಗುಣ ಹೊಂದಿದ್ದರು. ಅಲ್ಲದೇ, ರೋಗಿಗಳು ಬೇಗನೆ ಗುಣ ಹೊಂದಿದ್ದರು. ಆದರೆ, ಸದ್ಯ ಒಂದೇ ದಿನ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಇದು ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ರೋಗಿ ನಂ 533 ಮತ್ತು 556ರ ಟ್ರಾವೆಲ್ ಹಿಸ್ಟರಿ ನಿಖರವಾಗಿ ಇದುವರೆಗೂ ಪತ್ತೆಯಾಗಿಲ್ಲ. ಈಗಾಗಲೇ ಕೊರೊನಾಗೆ ದಾವಣಗೆರೆ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದಾರೆ. 28 ಪ್ರಕರಣಗಳು ಚಾಲ್ತಿಯಲ್ಲಿದ್ದು, 293 ಜನರ ರಕ್ತದ ಮಾದರಿಯನ್ನು ಟೆಸ್ಟ್ ಗೆ ಕಳುಹಿಸಲಾಗಿದೆ. ಕೇಸ್ ನಂಬರ್ 533 ವೃತ್ತಿಯಲ್ಲಿ ನರ್ಸ್ ಆಗಿದ್ದು, ಬರೋಬ್ಬರಿ 56 ಮನೆಗಳಿಗೆ ತೆರಳಿ ಸರ್ವೇ ಮಾಡಿದ್ದಾರೆ. ನರ್ಸ್ ದ್ವಿತೀಯ ಸಂಪರ್ಕಿತರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ.
ಈ ಮಧ್ಯೆ ಇನ್ನೊಂದು ಪ್ರಕರಣ ತಲೆನೋವು ತಂದಿಟ್ಟಿದೆ. 623ನೇ ರೋಗಿಯಾಗಿರುವ ವ್ಯಕ್ತಿ ಈರುಳ್ಳಿ ಮಾರಾಟ ಮಾಡಿದ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈರುಳ್ಳಿ ಖರೀದಿಗೆ ಬಾಗಲಕೋಟೆ, ವಿಜಯಪುರಕ್ಕೂ ಹೋಗಿ ಬಂದಿದ್ದಾರೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿದ್ದರಿಂದಾಗಿ ಎಲ್ಲಾ ವಿನಾಯ್ತಿಗಳನ್ನು ತಡೆ ಹಿಡಿಯಲಾಗಿದೆ. ನಗರದಾದ್ಯಂತ ಲಾಕ್ಡೌಾನ್ ಮುಂದುವರಿಸಿದ್ದು, ವ್ಯಾಪಾರಿಗಳು ಇಂದಿನಿಂದ ಕೃಷಿ ಮಾರುಕಟ್ಟೆ ಬಂದ್ ಮಾಡಲಿದ್ದಾರೆ. 14 ದಿನ ನಗರ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
