ಗದಗ: ಲಾಕ್ ಡೌನ್ ಹಿನ್ನೆಲೆ ಕಳೆದ 45 ದಿನಗಳಿಂದ ಸಾರಾಯಿ ಅಂಗಡಿ ಬಂದ ಇರುವುದರಿಂದ ಜನರಲ್ಲಿ ಶಿಸ್ತು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಮತ್ತೆ ಸಾರಾಯಿ ಅಂಗಡಿ ಆರಂಭವಾಗಿದ್ದರಿಂದ ಜನರಲ್ಲಿ ಶಿಸ್ತು ಮಾಯವಾಗಿದೆ ಎಂದು ಗದಗ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಅವರು ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಮಾಜಿ ಸಚಿವ ಎಸ್‌.ಎಸ್.ಪಾಟೀಲ್ ಅಭಿಮಾನಿ ಬಳಗ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ತಾಲೂಕಿನ ಎಲ್ಲ ಮನೆಗಳಿಗೆ ರೇಷನ್ ಹಾಗೂ ತರಕಾರಿ ಕಿಟ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಶಾಂತ ಪರಿಸ್ಥಿತಿ ಮುಂದುವರೆಯಬೇಕಾದರೆ ಮದ್ಯಪಾನ ನಿಷೇಧವಾಗಬೇಕು. ಇದು ನಾವು ನಿವೆಲ್ಲ ಒತ್ತಾಯಿಸೋದಲ್ಲ. ಸಂವಿಧಾನದ 47 ನೇ ಆರ್ಟಿಕಲ್ ಈ ಬಗ್ಗೆ ಹೇಳುತ್ತದೆ. ಸಂವಿಧಾನಕ್ಕಾದರೂ ಅಥವಾ ಮಹಾತ್ಮಾಗಾಂಧಿಜೀ ಅವರಿಗಾದರೂ ಗೌರವ ಕೊಟ್ಟು ಮದ್ಯ ನಿಷೇಧಕ್ಕೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ರೇಷನ್ ಪಡೆಯಲು ಕ್ಯೂ ನಿಲ್ಲಬೇಕಾದ ಜನರು ಇದೀಗ ಸಾರಾಯಿ ಅಂಗಡಿ ಎದುರು ಕ್ಯೂ ನಿಲ್ಲುವಂತಾಗಿದೆ ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮದ್ಯ ನಿಷೇಧ ಮಾಡಿ ಜನರ ನೆಮ್ಮದಿಗೆ ಕಾರಣವಾಗಬೇಕು ಎಂದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…

ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!!

ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: 2313 ಪಾಸಿಟಿವ್ ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟುತ್ತಿರುವುದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…