ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.
ಇದೇ ವೇಳೆ ನಿತ್ಯೋತ್ಸವ ಕವಿ ಪ್ರೊ. ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ. ಶರಣು ಗೋಗೇರಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರಕಾಶ ಮಂಗಳೂರು, ಅಶೋಕ ಹಾದಿ, ಬಿ.ಎಫ್.ಪೂಜಾರ, ಸಂತೋಷ ಕಾಶಪ್ಪನವರ, ಆನಂದ ಕಲ್ಮಠ ಮುಂತಾದವರು ಉಪಸ್ಥಿತರಿದ್ದರು.