ಹಾವೇರಿ: ಒಂದೇ ದಿನ ಹಾವೇರಿಯಲ್ಲಿ ಕೊಟ್ಯಾಂತರ ಮದ್ಯ ಬಿಕರಿಯಾಗಿದ್ದು ಇದರಿಂದ ನಿನ್ನೆ ಒಂದೇ ದಿನಕ್ಕೆ ಅಬಕಾರಿ ಇಲಾಖೆಗೆ ಎರಡು ಕೋಟಿಗೂ ಅಧಿಕ ಮೌಲ್ಯದ ಸಾರಾಯಿ ಮಾರಾಟವಾಗಿದೆ. ನಿನ್ನೆಯಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇದರಿಂದಾಗಿ ನಿನ್ನ ಸಾರಾಯಿ ಅಂಗಡಿ ತೆರದಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ. ಇದರಿಂದ ನಿನ್ನೆ ಒಂದೇ ದಿನ ಅಬಕಾರಿ ಇಲಾಖೆಗೆ 2 ಕೋಟಿ 93 ಲಕ್ಷ ರೂಪಾಯಿ ಸಂಗ್ರಹವಾಗಿದೆ. CL-2, CL-11 ಸೇರಿ ಒಟ್ಟು 104 ಮದ್ಯದಂಗಡಿಯಲ್ಲಿ 8292 ಬಾಕ್ಸ್ ಮದ್ಯ 1889 ಬಾಕ್ಸ್ ಬೀಯರ್ ವಹಿವಾಟು ನಡೆದಿದೆ.
You May Also Like
ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ
ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
- ಉತ್ತರಪ್ರಭ
- November 18, 2020