ಬೆಂಗಳೂರು: ತಮಗಿಷ್ಟವಾದ ದಾರಾವಾಹಿಗಳ ನಿಗದಿತ ಸಮಯಕ್ಕೆ ಸರಿಯಾಗಿ ಬಹುತೇಕ ಹೆಣ್ಣು ಮಕ್ಕಳು ಟಿವಿ ಮುಂದೆ ಹಾಜರ್ ಆಗಿ ಬಿಡುತ್ತಿದ್ದರು. ಆದರೆ ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ದಾರಾವಾಹಿಗಳನ್ನೆ ನಂಬಿ ಬದುಕುತ್ತಿದ್ದಾರೆ. ಇದರಿಂದ ಈ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಳಾಂಗಣ ಚಿತ್ರಿಕರಣಕ್ಕೆ ಅವಕಾಶ ನೀಡಿ ಅನುಮತಿ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.
ಜೊತೆಗೆ ಚಲನಚಿತ್ರಗಳಾಗಲೀ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿಲೀ ಯಾವುದೇ ವಿನಾಯಿತಿ ಇಲ್ಲ ಎಂದು ಅವರು ಹೇಳಿದ್ದಾರೆ.