ಮುಂಬೈ: ರಿಪಬ್ಲಿಕ್‌ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಕೋಮು ದ್ವೇಷ ಸೃಷ್ಟಿಸಿದ ಆರೋಪ ಹೊತ್ತುಕೊಂಡಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್‌ 14 ರಂದು ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಬಳಿ ಸಾವಿರಾರು ಜನ ವಲಸೆ ಕಾರ್ಮಿಕರು ತಮ್ಮ ಸ್ವಂತ ಗ್ರಾಮಗಳಿಗೆ ತೆರಳಲು ಜಮಾಯಿಸಿದ್ದರು.

ಲಾಕ್‌ ಡೌನ್‌ ನಡುವೆಯೂ ಕೇಂದ್ರ ಸರ್ಕಾರ ರೈಲನ್ನು ಬಿಟ್ಟಿದ್ದು ವಲಸೆ ಕಾರ್ಮಿಕರು ತವರಿಗೆ ತೆರಳಲು ಸಹಸ್ರ ಸಂಖ್ಯೆಯಲ್ಲಿ ಕೆಲ ಘಂಟೆಗಳಲ್ಲೇ ಜಮಾಯಿಸಿದ್ದರು. ವಾಸ್ತವವಾಗಿ ಈ ರೀತಿ ವಲಸೆ ಕಾರ್ಮಿಕರ ಜಮಾವಣೆಗೆ ಸ್ಥಳೀಯ ಚಾನೆಲ್‌ ಒಂದು ನೀಡಿದ ಸುಳ್ಳು ಸುದ್ದಿಯೇ ಇದಕ್ಕೂ ಕಾರಣವಾಗಿತ್ತು. ಆದರೆ ವಲಸೆ ಕಾರ್ಮಿಕರ ಈ ಜಮಾವಣೆ ಬಗ್ಗೆ ವರದಿ ಮಾಡುವಾಗ ಗೋಸ್ವಾಮಿ ಅವರ ರಿಪಬ್ಲಿಕ್‌ ಚಾನೆಲ್‌ ಸಂಭಂದವೇ ಇಲ್ಲದ ಬಾಂದ್ರಾದ ಮಸೀದಿಯ ದೃಶ್ಯವನ್ನು ಪದೇ ಪದೇ ತೋರಿಸಿತ್ತು. ಆದರೆ ಇದರಲ್ಲಿ ಮಸೀದಿಯ ಪಾತ್ರವೇನೂ ಇರಲಿಲ್ಲ ಎಂದು ಈ ಪ್ರಕರಣದ ದೂರುದಾರ ಇರ್ಫಾನ್ ಅಬೂಬಕರ್ ಶೇಖ್ ಆರೋಪಿಸಿದ್ದಾರೆ. ಈ ಬಗ್ಗೆ ಮುಂಬೈನ ಪೈಧೋನಿ ಪೋಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರ ಲಿಂ.ತೋಂಟದ ಶ್ರೀಗಳ ಹೆಸರಲ್ಲಿ ಭಾವೈಕ್ಯತೆ ಭವನ ನಿರ್ಮಿಸಲಿ: ಮಲ್ಲಿಕಾರ್ಜುನ ಐಲಿ ಒತ್ತಾಯ

ರಾಜ್ಯ ಸರ್ಕಾರ ಪೂಜ್ಯ ಲಿಂ.ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಹೆಸರಿನಿಂದ ಶ್ರೀಗಳ ಜನ್ಮದಿನವಾದ ಫೆ.21 ಈ ದಿನವನ್ನು ಭಾವೈಕ್ಯತೆ ದಿನವೆಂದು ಆಚರಿಸಬೇಕು. ಹಾಗೂ ಪ್ರತಿ ವರ್ಷ ಶ್ರೀಗಳ ಹೆಸರಿನಲ್ಲಿ ಭಾವೈಕ್ಯತೆ ಪ್ರಶಸ್ತಿ ನೀಡಬೇಕು ಎಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಐಲಿ ಒತ್ತಾಯಸಿದ್ದಾರೆ.

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…

ಕೊರೋನಾ ಕಾವ್ಯ-4

ಇವತ್ತಿನ ಕೊರೋನಾ ಕಾವ್ಯ ಸರಿಣಿಗೆ ಕವನ ಕಳುಹಿಸಿದವರು ಮಂಗಳಗೌರಿ ಹಿರೇಮಠ, ಮಂಗಳಗೌರಿ ಹಿರೇಮಠ ಇವರು ಗದಗನ ಬಸವೇಶ್ವರ ನಗರದವರು, ಸಾಹಿತ್ತಿಕವಾಗಿ ಅಭಿರುಚಿ ಉಳ್ಳ ಮಂಗಳಗೌರಿ ಅವರು ಸಾಕಷ್ಟು ಕವತೆಗಳನ್ನು ರಚಿಸಿದ್ದಾರೆ. ಊಹಿಸದೇ ಬಂದ ಘಳಿಗೆಯನ್ನು ಕೊರೋನಾದ ಈ ಸಂಕಷ್ಟ ಕಾಲದಲ್ಲಿ ಹದವಾಗಿ ಕಟ್ಟಿಕೊಟ್ಟಿದ್ದಾರೆ.