ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.
ಇಲ್ಲಿಯ ಕೋವಿಡ್ ಆಸ್ಪತ್ರೆಗಳಾದ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್ ದಲ್ಲಿ ಬಹುತೇಕ ಸಿ ಹಾಗೂ ಡಿ ಗ್ರೂಪ್ ನೌಕರರಿಗೆ ವೇತನವಾಗಿಲ್ಲ ಎಂದು ತಿಳಿದು ಬಂದಿದೆ.
ಸರ್ಕಾರ ಈ ಸಂದರ್ಭದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿಯ ಸಂಬಳಕ್ಕೆ ಕತ್ತರಿ ಹಾಕಿರುವುದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ವೈದ್ಯಕೀಯ ಸಿಬ್ಬಂದಿಗೆ ಸಂಬಳ ನೀಡಬೇಕು ಎಂದು ಜನರು ಹಾಗೂ ವೈದ್ಯಕೀಯ ಸಿಬ್ಬಂದಿ ಮನವಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನನ್ನ ಕ್ಷೇತ್ರವನ್ನೂ ಕನಕಪುರದವರು ಡಿಜೆ, ಕೆಜೆ ಹಳ್ಳಿ ಮಾಡಲು ಹೊರಟಿದ್ದಾರೆ!

ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಚರ್ಚಿಸಿದ ಮೋದಿ – ಯಾವೆಲ್ಲ ಚರ್ಚೆಗಳಾದವು?

ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಮತ್ತು ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.