ಚಿತ್ರದುರ್ಗ: ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಈ ಪೈಕಿ ಹೊಸಕೋಟೆಯ 13 ಜನರಿದ್ದು, ಇನ್ನುಳಿದ ಐವರು ಆಂಧ್ರದ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ಗಲಾಟೆ ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆ ನಂತರ ತಹಶಿಲ್ದಾರ್ ವರದರಾಜು ಸೇರಿದಂತೆ ಅಧಿಕಾರಿಗಳಿಂದ ಗ್ರಾಮಸ್ಥರ ಮನವೊಲಿಸಲಾಯಿತು. ಇಂದು ಬೆಳಿಗ್ಗೆ 5ಕ್ಕೆ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಯಿತು.

ಸದ್ಯ ಹಾಸ್ಟೇಲನ್ನು ಸೀಲ್ ಡೌನ್ ಮಾಡಲಾಗಿದೆ. ಪಾವಗಡ ಪಿಎಸ್ಐ ನಾಗರಾಜು, ವೈದ್ಯಾಧಿಕಾರಿ ತಿರುಪತಿ ಸ್ಥಳದಲ್ಲಿ ಸೇವೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿಯೇ ಯುವತಿಯ ಅತ್ಯಾಚಾರ..!

ಕ್ಯಾರೆಂಟೈನ್ ನಲ್ಲಿಯೇ ಇಬ್ಬರು ವಲಸೆ ಕಾರ್ಮಿಕರು ಸೇರಿದಂತೆ 6 ಪುರುಷರು 18 ವರ್ಷದ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ

ಗದಗ ಜಿಲ್ಲೆಯಲ್ಲಿ ಸೋಂಕು ಸರ್ವ ವ್ಯಾಪಿ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶನಿವಾರ ದಿ. 18 ರಂದು 82 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ…

ಪ್ರೇಯಸಿಯ ಸಮಾಧಿ ಮುಂದ.. ಆತ್ಮಹತ್ಯೆ ಮಾಡಿಕೊಂಡ ಹುಡುಗ..!

ತಿ ಕುರುಡು, ಪ್ರೇಮಕ್ಕೆ ಕಣ್ಣಿಲ್ಲ ಅಂತಾರ. ಅದು ಖರೆನಾ ಅನಿಸುತ್ತ. ಪ್ರಾಣಕ್ಕಿಂತ ಹೆಚ್ಚು ಪ್ರೀತಿಸ್ತಿದ್ದ ಪ್ರೇಯಸಿಯ ಸಮಾಧಿ ಎದುರು ಆತ್ಮಹತ್ಯೆ ಮಾಡಿಕೊಂಡು ಘಟನೆ ನಡದೈತಿ. ಬಿಳಿ ಹಾಳಿಯಂಗಿರೋ ಪ್ರೀತಿಗೆ ಪ್ರಾಣದ ಹಂಗಿಲ್ಲ ಅಂತಾರ. ಆದ್ರ ಈ ಜೋಡಿ ಈ ಮಾತು ಖರೆ ಮಾಡ್ಯಾರ. ಪ್ರೀತಿಯ ವಿಷಯದೊಳಗ ಮಾದರಿಯಾಗಿ ಕುಟುಂಬಸ್ಥರಿಗೆ ಶಾಶ್ವತ ದು:ಖ ನೀಡ್ಯಾರ.