ಬೆಂಗಳೂರು: ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿರುವ ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ. ಇಂದು ಇವರೆಲ್ಲರ ವರದಿ ಬರುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.
ಪೊಲೀಸ್ ಪೇದೆ ಬೆಂಗಳೂರಿನಲ್ಲಿಯೂ ನಾಲ್ಕು ಜನರ ಜೊತೆ ಸಂಪರ್ಕದಲ್ಲಿದ್ದರು. ಈ ನಾಲ್ವರ ವರದಿಯೂ ಇಂದು ಬರಲಿದೆ. ಒಟ್ಟು ಪೇದೆಯ ಸಂಪರ್ಕದಲ್ಲಿದ್ದ 26 ಜನರ ವರದಿಗಾಗಿ ವೈದ್ಯರು ಹಾಗೂ ಸರ್ಕಾರ ಕಾಯುತ್ತಿದೆ.