ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಹೀಗಾಗಿ ಸರ್ಕಾರ ಅವರ ಸಹಾಯಕ್ಕೆ ಮುಂದಾಗಿದೆ. ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರ ರೂ. 1,610 ಕೋಟಿಯ ವಿಶೇಷ ಪ್ಯಾಕೇಜ್‌ ಪ್ರಕಟಿಸಿದೆ.
ಅಗಸರು ಹಾಗೂ ಕ್ಷೌರಿಕರಿಗೆ ತಲಾ ರೂ. 5 ಸಾವಿರ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2.30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ. ರಾಜ್ಯದಲ್ಲಿರುವ 7.75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. 5 ಸಾವಿರ ಪರಿಹಾರ ನೀಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ54 ಸಾವಿರ ನೇಕಾರರಿಗೆ ವರ್ಷಕ್ಕೆ ರೂ. 2 ಸಾವಿರ ರೂ ನೆರವು ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ ರೂ. 25 ಸಾವಿರದಂತೆ ಪರಿಹಾರ ನೀಡಲಿದೆ. ಅಲ್ಲದೇ, ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್‌ ಅನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 10 ಕೊರೊನಾ ಪಾಸಿಟಿವ್: ಶತಕ ದಾಟಿದ ಸೋಂಕಿತರ ಸಂಖ್ಯೆ!

ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.