ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಹೀಗಾಗಿ ಸರ್ಕಾರ ಅವರ ಸಹಾಯಕ್ಕೆ ಮುಂದಾಗಿದೆ. ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ ಸರ್ಕಾರ ರೂ. 1,610 ಕೋಟಿಯ ವಿಶೇಷ ಪ್ಯಾಕೇಜ್‌ ಪ್ರಕಟಿಸಿದೆ.
ಅಗಸರು ಹಾಗೂ ಕ್ಷೌರಿಕರಿಗೆ ತಲಾ ರೂ. 5 ಸಾವಿರ ಪರಿಹಾರ ನೀಡಲಾಗುವುದು. ಇದರಿಂದ ಸುಮಾರು 60 ಸಾವಿರ ಅಗಸರು ಹಾಗೂ 2.30 ಸಾವಿರ ಕ್ಷೌರಿಕ ಸಮುದಾಯದವರಿಗೆ ಈ ನೆರವು ದೊರೆಯಲಿದೆ. ರಾಜ್ಯದಲ್ಲಿರುವ 7.75 ಸಾವಿರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರೂ. 5 ಸಾವಿರ ಪರಿಹಾರ ನೀಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ54 ಸಾವಿರ ನೇಕಾರರಿಗೆ ವರ್ಷಕ್ಕೆ ರೂ. 2 ಸಾವಿರ ರೂ ನೆರವು ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ ರೂ. 25 ಸಾವಿರದಂತೆ ಪರಿಹಾರ ನೀಡಲಿದೆ. ಅಲ್ಲದೇ, ಅತಿಸಣ್ಣ, ಸಣ್ಣ ಹಾಗೂ ಉದ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್‌ ಅನ್ನು ಎರಡು ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಗುಲಗಂಜಿಕೊಪ್ಪ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…

ಗದಗ ಜಿಲ್ಲೆಯಲ್ಲಿ 73 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.