ಹಾವೇರಿ: ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ಎರಡು ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಸೋಂಕಿತನ ಸಂಪರ್ಕದಲ್ಲಿದ್ದ ಇತರರ ವರದಿಗಾಗಿ  ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ಸೀಲ್ ಡೌನ್ ವಿರೋಧಿಸಿ ಎಸ್.ಎಂ ಕೃಷ್ಣ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಇಲ್ಲಿನ ಎಸ್.ಎಂ ಕೃಷ್ಣ ಬಡಾವಣೆಯಲ್ಲಿ ಸೋಂಕು‌ ಹರಡದಿರಲು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು ಲಾಕ್ ಡೌನ್ ಹಿನ್ನೆಲೆಯಲ್ಲಿ ತರಕಾರಿ ಹಾಗೂ ದಿನಸಿ ವಸ್ತುಗಳ ಖರೀದಿಗಾಗಿ ಸಾಲ ಮಾಡಿಕೊಂಡಿದ್ದೇವೆ. ಕಳೆದ 40 ದಿನಗಳಿಂದ ಕೂಲಿ ಕೆಲಸವಿಲ್ಲ ವಿಷ ಸೇವಿಸಲು ದುಡ್ಡಿಲ್ಲ. ಜಿಲ್ಲಾಡಳಿತ ದಿನನಿತ್ಯ ದಿನಸಿ ವಸ್ತುಗಳನ್ನು ಪುಕ್ಕಟೆಯಾಗಿ ನೀಡಬೇಕು, ಇಲ್ಲವಾದಲ್ಲಿ ನಮ್ಮನ್ನು ಸೀಲ್ ಡೌನ್ ಪ್ರದೇಶದಿಂದ ಮುಕ್ತಗೊಳಿಸಿ ಎಂದು ಒತ್ತಾಯಿಸಿದರು. ಈ ವೇಳೆ ಮದ್ಯ ಪ್ರವೇಶಿಸಿದ ಜಿಲ್ಲಾಧಿಕಾರಿಗಳು ಉಚಿತವಾಗಿ ದಿನನಿತ್ಯ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿದರು. ಡಿಸಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ!

ಮೈಸೂರು : ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹರಿಕೆ ತೀರಿಸಿದ್ದಾರೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕೂತುಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಬೇಟಿ

ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್‌ ದೆಹಲಿ ಭೇಟಿಗೆ ಮುಂದಾಗಿದ್ದಾರೆ.