ಹಾವೇರಿ: ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ಎರಡು ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಸೋಂಕಿತನ ಸಂಪರ್ಕದಲ್ಲಿದ್ದ ಇತರರ ವರದಿಗಾಗಿ  ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ಸೀಲ್ ಡೌನ್ ವಿರೋಧಿಸಿ ಎಸ್.ಎಂ ಕೃಷ್ಣ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಇಲ್ಲಿನ ಎಸ್.ಎಂ ಕೃಷ್ಣ ಬಡಾವಣೆಯಲ್ಲಿ ಸೋಂಕು‌ ಹರಡದಿರಲು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು ಲಾಕ್ ಡೌನ್ ಹಿನ್ನೆಲೆಯಲ್ಲಿ ತರಕಾರಿ ಹಾಗೂ ದಿನಸಿ ವಸ್ತುಗಳ ಖರೀದಿಗಾಗಿ ಸಾಲ ಮಾಡಿಕೊಂಡಿದ್ದೇವೆ. ಕಳೆದ 40 ದಿನಗಳಿಂದ ಕೂಲಿ ಕೆಲಸವಿಲ್ಲ ವಿಷ ಸೇವಿಸಲು ದುಡ್ಡಿಲ್ಲ. ಜಿಲ್ಲಾಡಳಿತ ದಿನನಿತ್ಯ ದಿನಸಿ ವಸ್ತುಗಳನ್ನು ಪುಕ್ಕಟೆಯಾಗಿ ನೀಡಬೇಕು, ಇಲ್ಲವಾದಲ್ಲಿ ನಮ್ಮನ್ನು ಸೀಲ್ ಡೌನ್ ಪ್ರದೇಶದಿಂದ ಮುಕ್ತಗೊಳಿಸಿ ಎಂದು ಒತ್ತಾಯಿಸಿದರು. ಈ ವೇಳೆ ಮದ್ಯ ಪ್ರವೇಶಿಸಿದ ಜಿಲ್ಲಾಧಿಕಾರಿಗಳು ಉಚಿತವಾಗಿ ದಿನನಿತ್ಯ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿದರು. ಡಿಸಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.

Leave a Reply

Your email address will not be published. Required fields are marked *

You May Also Like

ಸಿಂಧನೂರು: ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ಜಾಗೃತಿ

ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಪಕ್ಷದ ಮುಖಂಡ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…